5:02 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಜತೆ ಬಿಜೆಪಿ ಹೊಂದಾಣಿಕೆ ರಾಜಕಾರಣ ಮಾಡುತ್ತೇ?: ಸಂಸದ ಪ್ರತಾಪ್ ಸಿಂಹ ಸ್ವಪಕ್ಷೀಯ ನಾಯಕ ವಿರುದ್ದವೇ ಮಾಡಿದ ಆರೋಪ ಏನು?

13/06/2023, 22:07

ಬೆಂಗಳೂರು(reporterkarnataka.com): ಬಿಜೆಪಿ ಅಧಿಕಾರದಲ್ಲಿದ್ದಾಗ ಪಕ್ಷದ ಅತಿರಥ ಮಹಾರಥ ನಾಯಕರು ಮಾಡಿದ ಹೊಂದಾಣಿಕೆ ರಾಜಕಾರಣದಿಂದ ಪಕ್ಷಕ್ಕೆ ಈ ಸ್ಥಿತಿ ಬಂತು ಎಂದು ಸ್ವಪಕ್ಷೀಯ ನಾಯಕರ ವಿರುದ್ಧವೇ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಎಗರಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಈ ಮುನ್ನ ಹೊಂದಾಣಿಕೆ ರಾಜಕಾರಣದ ಬಗ್ಗೆ ಧ್ವನಿ ಎತ್ತಿದ್ದರು. ಇದೀಗ ಸಂಸದ ಪ್ರತಾಪ ಸಿಂಹ ಅವರು ಸಿ.ಟಿ. ರವಿ ಅಭಿಪ್ರಾಯಕ್ಕೆ ಧ್ವನಿಗೂಡಿಸಿದ್ದಾರೆ.
ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಹೊಂದಾಣಿಕೆ ರಾಜಕಾರಣ ನಡೆದಿತ್ತು. ಅರ್ಕಾವತಿ ಡಿ ನೋಟಿಪಿಕೇಶನ್ ಬಗ್ಗೆಯಾಗಲಿ, ರೀಡೂ ಕುರಿತಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಾವಿನ ಪೆಟ್ಟಿಗೆಯಲ್ಲಿ ಹಾವಿದೆ ಎಂದು ಹೇಳಿದ್ದೇ ಹೊರತು ಹಾವನ್ನು ಹೊರತೆಗೆಯುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿಲ್ಲ. ನನ್ನ ಬೆನ್ನು ನೀನು ಕೆರಿ, ನಿನ್ನ ಬೆನ್ನು ನಾನು ಕೆರಿತ್ತೀನಿ ಅಂತ ಬಿಜೆಪಿ ನಾಯಕರು ಕಾಂಗ್ರೆಸ್ ಜತೆ
ಹೊಂದಾಣಿಕೆ ಮಾಡಿಕೊಂಡಿದ್ದರು. ಇದೀಗ ಕಾಂಗ್ರೆಸ್ ಸರಕಾರದ ಪರಿಸ್ಥಿತಿಯೂ ಅದೇ ಆಗಿದೆ. ಚುನಾವಣೆಯ ಸಮಯದಲ್ಲಿ ಪಿಎಸ್ ಐ ಹಗರಣ, 40 ಪರ್ಸಂಟ್, ಬಿಟ್ ಕಾಯಿನ್ ಹಗರಣ ಎಂದೆಲ್ಲ ಹೇಳಿದರು. ಈಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂತು. ಯಾಕೆ ಇವರು ಈ ಹಗರಣಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ? ಸಿದ್ದರಾಮಯ್ಯ ಅವರು ಕೂಡ ಹೊಂದಾಣಿಕೆ ರಾಜಕಾರಣದಲ್ಲಿ ಶಾಮೀಲಾಗಿದ್ದಾರೆಯೇ? ನಮ್ಮ ನಾಯಕರು ನಿಮ್ಮ ಜತೆ ಹೊಂದಾಣಿಕೆ ರಾಜಕಾರಣದಲ್ಲಿ ಶಾಮೀಲಾಗಬಹುದು. ಆದರೆ ನಮ್ಮ ಕಾರ್ಯಕರರು ನಿಮ್ಮ ಜತೆ ಶಾಮೀಲಾಗುವುದಿಲ್ಲ. ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಪ್ರತಾಪ್ ಸಿಂಹ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು