ಇತ್ತೀಚಿನ ಸುದ್ದಿ
ಕಾಂಗ್ರೆಸ್ ನಾಯಕರ ಹೇಳಿಕೆಯಿಂದ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ ಸಚಿವ ಶ್ರೀರಾಮುಲು
23/04/2026, 21:15
ಗಣೇಶ್ ಇನಾಂದಾರ್ ಬಳ್ಳಾರಿ
info.reporterkarnataka@gmail.com
ದೇಶದ ಪ್ರಧಾನಮಂತ್ರಿ ಯನ್ನು ಟೆರರಿಸ್ಟ್ ಎಂದು ಕರೆಯುವ ಮೂಲಕ ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವದ
ಮೌಲ್ಯಗಳಿಗೆ ಧಕ್ಕೆ ತಂದಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ತೀವ್ರ ವಾಗ್ದಾಳಿ ನಡೆಸಿದರು.
ಬಳ್ಳಾರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಇಂತಹ ಹೇಳಿಕೆಗಳು ದೇಶದ ರಾಜಕೀಯ ಸಂಸ್ಕøತಿಗೆ ಹಾನಿ ಉಂಟುಮಾಡುತ್ತವೆ ಎಂದ ಅವರು ಹಾಗೆಯೇ ಯಾಸಿನ್ ಮಲಿಕ್ ಅವರಂತಹ ವ್ಯಕ್ತಿಗಳನ್ನು ಸನ್ಮಾನಿಸುವ ಕಾಂಗ್ರೆಸ್ ನಾಯಕತ್ವದ ನಡೆ ಪ್ರಶ್ನಾರ್ಹವಾಗಿದೆ ಎಂದು ಆರೋಪಿಸಿದರು.
ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವು ಸ್ಪಷ್ಟವಾಗಿಲ್ಲದೆ, ಮಹಿಳೆಯರಿಗೆ ನಿಜವಾದ ನ್ಯಾಯ ಒದಗಿಸುವ ಬದಲು ಕೇವಲ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದರು.
ಶೇಕಡಾ 33 ಮಹಿಳಾ ಮೀಸಲಾತಿ ದೇಶದ ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಮಹತ್ವದ ಹೆಜ್ಜೆಯಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಈ ಮಹತ್ವದ ಕ್ರಮಕ್ಕೂ ವಿರೋಧ ವ್ಯಕ್ತಪಡಿಸುತ್ತಿರುವುದು ಅವರ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದು ಆರೋಪಿಸಿದರು.
ಮಹಿಳಾ ಸಬಲೀಕರಣದ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ನಾಯಕರು, ವಾಸ್ತವದಲ್ಲಿ ಮಹಿಳೆಯರ ಹಕ್ಕುಗಳನ್ನು ಕಾಪಾಡಲು ವಿಫಲರಾಗಿದ್ದಾರೆ. ಮಹಿಳೆಯರ ಅಭಿವೃದ್ಧಿಗೆ ಅಗತ್ಯವಾದ ನೀತಿಗಳನ್ನು ಜಾರಿಗೆ ತರುವಲ್ಲಿ ಅವರು ಆಸಕ್ತಿ ತೋರಿಸಿಲ್ಲ
ಎಂದು ಹೇಳಿದರು.
ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಅವಕಾಶ ಕಲ್ಪಿಸುವಲ್ಲಿ ಮುಂದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ್ ಮೋತ್ಕರ್,ಗುರುಲಿಂಗನ ಗೌಡ, ಗುಡಿಗಂಟಿ ಹನುಮಂತ,ವೆಂಕಟರಾಮಿರೆಡ್ಡಿ, ಹನುಮಂತಪ್ಪ, ಉಜ್ವಲ
ಶ್ರೀಧರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.












