2:27 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದರೆ ನೀರಾವರಿಗೆ 2 ಲಕ್ಷ ಕೋಟಿ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

28/09/2022, 13:55

ಜಮಖಂಡಿ(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಸಹಿತ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗೆ 2 ಲಕ್ಷ ಕೋಟಿ ಅನುದಾನ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. 

ಜಮಖಂಡಿ ತಾಲೂಕಿನ ಹಿರೇಪಡಸಲಗಿಯ ಜಮಖಂಡಿ ಶುಗರ್ಸ್‌ ಆವರಣದಲ್ಲಿ ಕೃಷ್ಣಾತೀರರತ್ನ ಶಾಸಕ ದಿ.ಸಿದ್ದು ನ್ಯಾಮಗೌಡ ಕಂಚಿನ ಪುತ್ಥಳಿ ಅನಾವರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಹೊಸಪೇಟೆಯಿಂದ ಕೂಡಲಸಂಗಮವರೆಗಿನ ಪಾದಯಾತ್ರೆ ಸಂದರ್ಭದಲ್ಲಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ. ಕಳೆದ ಚುನಾವಣೆಯಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ನೀಡುವ ಹೆಚ್ಚುವರಿಯಾಗಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ವರ್ಷಕ್ಕೆ 10 ಸಾವಿರ ಕೋಟಿಯಂತೆ 5 ವರ್ಷದಲ್ಲಿ 58 ಸಾವಿರ ಕೋಟಿ ಹಣ ನೀರಾವರಿ ಯೋಜನೆಗಳಿಗೆ ನೀಡಿ ನುಡಿದಂತೆ ನಡೆದುಕೊಂಡಿದ್ದೇವೆ ಎಂದು ತಿಳಿಸಿದರು.

1987 ರಲ್ಲಿ ಕೃಷ್ಣಾತೀರ ರೈತ ಸಂಘ ನಿರ್ಮಿಸುವ ಮೂಲಕ ರೈತರ ಶ್ರಮದಾನದಲ್ಲಿ 1989 ರಲ್ಲಿ 11 ತಿಂಗಳ ಅವಧಿಯಲ್ಲಿ 90 ಲಕ್ಷ ವೆಚ್ಚದಲ್ಲಿ ಖಾಸಗಿ ಬ್ಯಾರೇಜ್‌ ನಿರ್ಮಿಸಿದ್ದು, ಇತಿಹಾಸವಾಗಿದೆ. ರೈತರ ಶ್ರಮದಾನದಿಂದ ನಿರ್ಮಾಣಗೊಂಡ ಬ್ಯಾರೇಜ್‌ದಿಂದ ಜಮಖಂಡಿ ಮತ್ತು ಅಥಣಿ ತಾಲೂಕಿನ 35 ಗ್ರಾಮಗಳ ರೈತರು 40 ಸಾವಿರ ಎಕರೆ ನೀರಾವರಿ ವ್ಯವಸ್ಥೆ ಹೊಂದಿದ್ದಾರೆ. ಬ್ಯಾರೇಜ್‌ ನಿರ್ಮಾಣದಿಂದ ಪ್ರಸಕ್ತ ರೈತರು ಆರ್ಥಿಕರಾಗಿ ಸಬಲರಾಗಿದ್ದು, ನೀರಾವರಿ ಇಲ್ಲದೇ ಹೋದರೆ ಕೃಷಿ ಲಾಭ ದಾಯಕವಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು