ಇತ್ತೀಚಿನ ಸುದ್ದಿ
ಕಾಂಗ್ರೆಸ್ ಮುಕ್ತ ಭಾರತ ನಿರ್ಮಿಸಲು ಯಾರ ಅಪ್ಪನಿಂದಲೂ ಸಾಧ್ಯವಿಲ್ಲ : ಹ್ಯಾರಿಸ್ ನಲಪಾಡ್
31/03/2022, 13:31

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಅದು ದೇಶದ ಇತಿಹಾಸ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡಲು ಯಾರ ಅಪ್ಪನಿಂದಲೂ ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದರು.
ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆ ಹೋರಾಟಗಳಲ್ಲಿ ಮುಂದಿದೆ ಆದರೆ ಕಾರ್ಯಕರ್ತರನ್ನು ಸಂಘಟಿಸುವುದರಲ್ಲಿ ವಿಫಲವಾಗಿದೆ ಎಂದು ವಿಷಾದವನ್ನೂ ವ್ಯಕ್ತಪಡಿಸಿದರು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮಾತನಾಡಿ, ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಬೇಕಿದೆ ಎಂದರು.
ಕಾಂಗ್ರೆಸ್ನ ರಾಜ್ಯ ಉಸ್ತುವಾರಿಗಳಾದ ಅನಿಲ್ ಕುಮಾರ್ ಯಾದವ್
ವಿದ್ಯಾ ಬಾಲಕೃಷ್ಣನ್,ಮುಖಂಡರಾದ ಐವನ್ ಡಿಸೋಜಾ, ಜೆ ಆರ್ ಲೋಬೊ,ಮೊಯಿದ್ದೀನ್ ಬಾವ,ಮಾಜಿ ಸಚಿವ ರಮಾನಾಥ ರೈ ಮಿಥುನ್ ರೈ,ಲುಕ್ಮಾನ್ ಬಂಟ್ವಾಳ ಮಾತನಾಡಿದರು.
ಈ ಸಂದರ್ಭ ಮಂಗಳೂರು ಉತ್ತರ, ದಕ್ಷಿಣ, ಗುರುಪುರ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.
ಗುರುಪುರ ಬ್ಲಾಕ್ ಕಾಂಗ್ರೆಸ್ ಸುರೇಂದ್ರ ಕಂಬಳಿ ನಗರ ಬ್ಲಾಕ್ ಪ್ರಕಾಶ್ ಪಿ ಸಾಲ್ಯಾನ್, ಉಮೇಶ್ ದಂಡಕೇರಿ,ರಾಜ್ಯ ಪ್ರಧಾನ ಕಾರ್ಯದರ್ಶಿ
ಮೆರಿಲ್ ರೇಗೊ,ಯುವ ಕಾಂಗ್ರೆಸ್ ಉಪಾಧ್ಯಕ್ಷ ಗಿರೀಶ್ ಆಳ್ವ,ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ,ಸಾಹುಲ್ ಹಮೀದ್
ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಹಾಗೂ ಸ್ಥಳೀಯ ಮುಖಂಡರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು.