5:15 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಶಾಸಕ ಡಾ.ಭರತ್ ಶೆಟ್ಟಿ ಲೇವಡಿ

08/02/2024, 18:17

ಸುರತ್ಕಲ್(reporterkarnataka.com): ಕಾಂಗ್ರೆಸ್ ಮುಳುಗು ತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಕಾವೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಪಕ್ಷದ ಯುವ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರಚಾರ ಸ್ಟಂಟ್ ಎಂದು ಬಣ್ಣಿಸಿರುವ ಶಾಸಕರು, ಕಾಂಗ್ರೆಸ್ ಹಣ ,ಹೆಂಡ ಬಳಸಿ ಚುನಾವಣೆ ಗೆಲ್ಲುತ್ತಿದ್ದ ಕಾಲವೊಂದಿತ್ತು. ಬಿಜೆಪಿಯ ಆಡಳಿತದ ಬಳಿಕ ಮತದಾರ ಜಾಗೃತನಾಗಿ ಕಾಂಗ್ರೆಸ್‍ನ ಹೆಂಡ ರಾಜಕೀಯ ಅರಿತು ಬಿಜೆಪಿಯನ್ನು ಸತತವಾಗಿ ಆಯ್ಕೆ ಮಾಡುತ್ತಿದ್ದಾರೆ. ಇದರಿಂದ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಭ್ರಮ ನಿರಸನಗೊಂಡು ಹೋರಾಟಕ್ಕೆ ಇಳಿದಂತಿದೆ.
ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ,ವಿವಿಧ ಇಲಾಖೆಯ ಮೂಲಕ ,ಸಾವಿರಾರು ಕೋ.ರೂ ಅನುದಾನ ತಂದು ಸದ್ಬಳಕೆ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ರೈಲ್ವೆ,ಹೆದ್ದಾರಿ,ಕೋಸ್ಟ್ ಗಾರ್ಡ್ ಟ್ರೈನಿಂಗ್ ಸೆಂಟರ್,ಪ್ಲಾಸ್ಟಿಕ್ ಪಾರ್ಕ್ ಸಹಿತ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ಕಣ್ಣಮುಂದಿವೆ.
ಕಾಂಗ್ರೆಸ್ ಕಾರ್ಯಕರ್ತರು , ನಾಯಕರು ಈ ಎಲ್ಲಾ ಮಾಹಿತಿ ಪಡೆದುಕೊಂಡು ತನ್ನ ಜ್ನಾನ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು