3:28 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಶಾಸಕ ಡಾ.ಭರತ್ ಶೆಟ್ಟಿ ಲೇವಡಿ

08/02/2024, 18:17

ಸುರತ್ಕಲ್(reporterkarnataka.com): ಕಾಂಗ್ರೆಸ್ ಮುಳುಗು ತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಕಾವೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಪಕ್ಷದ ಯುವ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರಚಾರ ಸ್ಟಂಟ್ ಎಂದು ಬಣ್ಣಿಸಿರುವ ಶಾಸಕರು, ಕಾಂಗ್ರೆಸ್ ಹಣ ,ಹೆಂಡ ಬಳಸಿ ಚುನಾವಣೆ ಗೆಲ್ಲುತ್ತಿದ್ದ ಕಾಲವೊಂದಿತ್ತು. ಬಿಜೆಪಿಯ ಆಡಳಿತದ ಬಳಿಕ ಮತದಾರ ಜಾಗೃತನಾಗಿ ಕಾಂಗ್ರೆಸ್‍ನ ಹೆಂಡ ರಾಜಕೀಯ ಅರಿತು ಬಿಜೆಪಿಯನ್ನು ಸತತವಾಗಿ ಆಯ್ಕೆ ಮಾಡುತ್ತಿದ್ದಾರೆ. ಇದರಿಂದ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಭ್ರಮ ನಿರಸನಗೊಂಡು ಹೋರಾಟಕ್ಕೆ ಇಳಿದಂತಿದೆ.
ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ,ವಿವಿಧ ಇಲಾಖೆಯ ಮೂಲಕ ,ಸಾವಿರಾರು ಕೋ.ರೂ ಅನುದಾನ ತಂದು ಸದ್ಬಳಕೆ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ರೈಲ್ವೆ,ಹೆದ್ದಾರಿ,ಕೋಸ್ಟ್ ಗಾರ್ಡ್ ಟ್ರೈನಿಂಗ್ ಸೆಂಟರ್,ಪ್ಲಾಸ್ಟಿಕ್ ಪಾರ್ಕ್ ಸಹಿತ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ಕಣ್ಣಮುಂದಿವೆ.
ಕಾಂಗ್ರೆಸ್ ಕಾರ್ಯಕರ್ತರು , ನಾಯಕರು ಈ ಎಲ್ಲಾ ಮಾಹಿತಿ ಪಡೆದುಕೊಂಡು ತನ್ನ ಜ್ನಾನ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು