1:59 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಶಾಸಕ ಡಾ.ಭರತ್ ಶೆಟ್ಟಿ ಲೇವಡಿ

08/02/2024, 18:17

ಸುರತ್ಕಲ್(reporterkarnataka.com): ಕಾಂಗ್ರೆಸ್ ಮುಳುಗು ತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಕಾವೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಪಕ್ಷದ ಯುವ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರಚಾರ ಸ್ಟಂಟ್ ಎಂದು ಬಣ್ಣಿಸಿರುವ ಶಾಸಕರು, ಕಾಂಗ್ರೆಸ್ ಹಣ ,ಹೆಂಡ ಬಳಸಿ ಚುನಾವಣೆ ಗೆಲ್ಲುತ್ತಿದ್ದ ಕಾಲವೊಂದಿತ್ತು. ಬಿಜೆಪಿಯ ಆಡಳಿತದ ಬಳಿಕ ಮತದಾರ ಜಾಗೃತನಾಗಿ ಕಾಂಗ್ರೆಸ್‍ನ ಹೆಂಡ ರಾಜಕೀಯ ಅರಿತು ಬಿಜೆಪಿಯನ್ನು ಸತತವಾಗಿ ಆಯ್ಕೆ ಮಾಡುತ್ತಿದ್ದಾರೆ. ಇದರಿಂದ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಭ್ರಮ ನಿರಸನಗೊಂಡು ಹೋರಾಟಕ್ಕೆ ಇಳಿದಂತಿದೆ.
ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ,ವಿವಿಧ ಇಲಾಖೆಯ ಮೂಲಕ ,ಸಾವಿರಾರು ಕೋ.ರೂ ಅನುದಾನ ತಂದು ಸದ್ಬಳಕೆ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ರೈಲ್ವೆ,ಹೆದ್ದಾರಿ,ಕೋಸ್ಟ್ ಗಾರ್ಡ್ ಟ್ರೈನಿಂಗ್ ಸೆಂಟರ್,ಪ್ಲಾಸ್ಟಿಕ್ ಪಾರ್ಕ್ ಸಹಿತ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ಕಣ್ಣಮುಂದಿವೆ.
ಕಾಂಗ್ರೆಸ್ ಕಾರ್ಯಕರ್ತರು , ನಾಯಕರು ಈ ಎಲ್ಲಾ ಮಾಹಿತಿ ಪಡೆದುಕೊಂಡು ತನ್ನ ಜ್ನಾನ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು