11:47 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನ ‘ರಾಷ್ಟ್ರಪತ್ನಿ’ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ: ಸೋನಿಯಾ ಕ್ಷಮೆಯಾಚನೆಗೆ ಪಟ್ಟು

28/07/2022, 17:52

ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಅಂತ ಕರೆದು ಕಾಂಗ್ರೆಸ್ ಅವಮಾನಿಸಿದ್ದು, ಕೂಡಲೇ ಕ್ಷಮೆಯಾಚಿಸಬೇಕೆಂದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ನಿಂದಿಸಿ ಅಗೌರವ ತೋರಿದ್ದಾರೆಂದು ಸಂಸತ್ತಿನಲ್ಲಿ ಬಿಜೆಪಿ ಮಹಿಳಾ ಸಂಸದರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಈ ಹೇಳಿಕೆಗಳಿಗೆ ಕಾಂಗ್ರೆಸ್ ತಕ್ಷಣ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಲೋಕಸಭೆಯ ಕಲಾಪವನ್ನು ಸ್ಥಗಿತಗೊಳಿಸಿದರು.

ಬುಡಕಟ್ಟು ಮಹಿಳೆಯೊಬ್ಬರು ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿರುವುದನ್ನು ಕಾಂಗ್ರೆಸ್‌ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.  ಅದಕ್ಕಾಗಿಯೇ ರಾಷ್ಟ್ರಪತಿಗಳ ಬಗ್ಗೆ ಅನುಚಿತ ಹೇಳಿಕೆ ನೀಡಿದ್ದಾರೆಂದು ಕಿಡಿ ಕಾರಿದ್ದಾರಿದ್ದಲ್ಲದೆ, ಈ ಅಸಂಬದ್ಧ ಹೇಳಿಕೆ ದೇಶದ ಸಮಸ್ತ ಜನತೆಗೆ ಮಾಡಿದ ಅವಮಾನ ಎಂದರು.

ಅಧೀರ್ ರಂಜನ್ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೋನಿಯಾ ಗಾಂಧಿ ಅವರ ಪ್ರತಿಕೃತಿ ದಹಿಸಲು ಕರೆ ನೀಡಿದ್ದು, ಅಧೀರ್ ರಂಜನ್ ಹೇಳಿಕೆಗೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ದೇಶದ ಅತ್ಯುನ್ನತ ಬುಡಕಟ್ಟು ಜನಾಂಗದವರ ಅಸ್ಮಿತೆಗೆ ಸಾಕ್ಷಿಯಾಗಿ ನಿಂತಿರುವ ದ್ರೌಪದಿ ಮುರ್ಮು ಅವರನ್ನು ಅವಮಾನಿಸುವುದು. ಇದು ಕಾಂಗ್ರೆಸ್ ನಾಯಕರ ಸಂಸ್ಕೃತಿಯ ಪ್ರತಿಬಿಂಬ ಮಾತ್ರವಲ್ಲದೆ ದ್ವೇಷದ ಪ್ರದರ್ಶನವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹೇಳಿಕೆಗೆ ಕಾಂಗ್ರೆಸ್ ಕೂಡಲೇ ಕ್ಷಮೆಯಾಚಿಸಬೇಕು. ರಾಷ್ಟ್ರಪತಿ ವಿರುದ್ಧ ಅನುಚಿತ ಹೇಳಿಕೆ ನೀಡಿದ ಅಧೀರ್ ರಂಜನ್ ಅವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು