5:21 PM Friday6 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಈ ಬಾರಿಯೂ ನಾಪತ್ತೆ; ಶೆಟ್ಟರ್ ಗೆ ಹುಬ್ಲಿ-ಧಾರವಾಡ ಟಿಕೆಟ್

18/04/2023, 22:30

ಬೆಂಗಳೂರು(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಮಂಗಳೂರು ಉತ್ತರ ಸೇರಿದಂತೆ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿಲ್ಲ.
ಕಾಂಗ್ರೆಸ್ ಹಾಗೂ ಸಾರ್ವಜನಿಕ ವಲಯದಲ್ಲಿ
ತೀವ್ರ ಕುತೂಹಲ ಕೇರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರಕ್ಕೆ ಮತ್ತೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧೆ ಮಾಡಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮುಹಮ್ಮದ್ ಯೂಸುಫ್ ಸವಣೂರು ಹೆಸರನ್ನು ಘೋಷಣೆ ಮಾಡಲಾಗಿದೆ.
ಈಗಾಗಲೇ ಕಾಂಗ್ರೆಸ್ 224 ಅಭ್ಯರ್ಥಿಗಳ ಪೈಕಿ 209 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್‌ ಹೈಕಮಾಂಡ್‌ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿತ್ತು. ಕಳೆದ ಶನಿವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ. ಈಗ ಮತ್ತೆ 7 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳ ವಿವರ
* ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ – ಜಗದೀಶ್ ಶೆಟ್ಟರ್
*ಶಿಗ್ಗಾಂವಿ- ಮುಹಮ್ಮದ್ ಯೂಸುಫ್
*ಹುಬ್ಬಳ್ಳಿ -ಧಾರವಾಡ ಪಶ್ಚಿಮ- ಪ್ರದೀಪ್ ಚಿಂಚೋರೆ
*ಹರಿಹರ- ನಂದಗವಿ ಶ್ರೀನಿವಾಸ್
*ಚಿಕ್ಕಮಗಳೂರು- ಎಚ್. ಡಿ ತಮ್ಮಯ್ಯ
*ಶ್ರವಣಬೆಳಗೂಳ- ಎಂ.ಗೋಪಾಲಸ್ವಾಮಿ
*ಲಿಂಗಸುಗೂರು- ದುರ್ಗಪ್ಪ ಎಸ್.ಹೊಳಗೇರಿ

ಇತ್ತೀಚಿನ ಸುದ್ದಿ

ಜಾಹೀರಾತು