8:35 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಈ ಬಾರಿಯೂ ನಾಪತ್ತೆ; ಶೆಟ್ಟರ್ ಗೆ ಹುಬ್ಲಿ-ಧಾರವಾಡ ಟಿಕೆಟ್

18/04/2023, 22:30

ಬೆಂಗಳೂರು(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಮಂಗಳೂರು ಉತ್ತರ ಸೇರಿದಂತೆ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿಲ್ಲ.
ಕಾಂಗ್ರೆಸ್ ಹಾಗೂ ಸಾರ್ವಜನಿಕ ವಲಯದಲ್ಲಿ
ತೀವ್ರ ಕುತೂಹಲ ಕೇರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರಕ್ಕೆ ಮತ್ತೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧೆ ಮಾಡಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮುಹಮ್ಮದ್ ಯೂಸುಫ್ ಸವಣೂರು ಹೆಸರನ್ನು ಘೋಷಣೆ ಮಾಡಲಾಗಿದೆ.
ಈಗಾಗಲೇ ಕಾಂಗ್ರೆಸ್ 224 ಅಭ್ಯರ್ಥಿಗಳ ಪೈಕಿ 209 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್‌ ಹೈಕಮಾಂಡ್‌ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿತ್ತು. ಕಳೆದ ಶನಿವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ. ಈಗ ಮತ್ತೆ 7 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳ ವಿವರ
* ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ – ಜಗದೀಶ್ ಶೆಟ್ಟರ್
*ಶಿಗ್ಗಾಂವಿ- ಮುಹಮ್ಮದ್ ಯೂಸುಫ್
*ಹುಬ್ಬಳ್ಳಿ -ಧಾರವಾಡ ಪಶ್ಚಿಮ- ಪ್ರದೀಪ್ ಚಿಂಚೋರೆ
*ಹರಿಹರ- ನಂದಗವಿ ಶ್ರೀನಿವಾಸ್
*ಚಿಕ್ಕಮಗಳೂರು- ಎಚ್. ಡಿ ತಮ್ಮಯ್ಯ
*ಶ್ರವಣಬೆಳಗೂಳ- ಎಂ.ಗೋಪಾಲಸ್ವಾಮಿ
*ಲಿಂಗಸುಗೂರು- ದುರ್ಗಪ್ಪ ಎಸ್.ಹೊಳಗೇರಿ

ಇತ್ತೀಚಿನ ಸುದ್ದಿ

ಜಾಹೀರಾತು