6:56 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್ ಗೆ ದೂರು?

20/06/2021, 08:59

ಬೆಂಗಳೂರು(reporterkarnataka news): ಆಡಳಿತರೂಢ ಬಿಜೆಪಿಯಲ್ಲಿ ಭಿನ್ನಮತ ಸ್ವಲ್ಪ ಮಟ್ಟಿಗೆ ತಣ್ಣಗಾಗುತ್ತಿದ್ದಂತೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಮಾಜಿ ಸಚಿವ ಜಮೀರ್ ಖಾನ್ ವಿಷಯದಲ್ಲಿ ಪಕ್ಷದ ಇಬ್ಬರು ಪ್ರಮುಖ ನಾಯಕರೊಳಗೆ ಮುಸುಕಿನ ಗುದ್ದಾಟ ಆರಂಭವಾಗಿದೆ.

ಜಮೀರ್ ಖಾನ್ ಅವರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಪದೇ ಪದೇ ಹೇಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವುದು ಈ ಎಲ್ಲ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಈ ಕುರಿತು ಜಮೀರ್ ಅವರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ. ಆದರೆ ಜಮೀರ್ ಅವರು ಇದು ಯಾವುದಕ್ಕೂ ಕ್ಯಾರೇ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಮೀರ್
ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಶಿವಕುಮಾರ್ ಅವರು ದೂರು ನೀಡಲಿದ್ದಾರೆ ಎನ್ನಲಾಗಿದೆ.

ಜಮೀರ್ ಖಾನ್ ಅವರು ಹೋದ ಕಡೆಗಳೆಲ್ಲ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ, ಅವರನ್ನು 40 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸುತ್ತೇನೆ ಎಂದು ಹೇಳಿಕೊಳ್ಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿರುವ ಬಗ್ಗೆ ಶಿವಕುಮಾರ್ ತಕರಾರು ಎತ್ತಿದ್ದಾರೆ. ಕುಮಾರಸ್ವಾಮಿ ವಿರುದ್ಧ ಪದೇ ಪದೇ ನಿಂದನಾತ್ಮಕ ಹೇಳಿಕೆ ನೀಡುವುದು, ಏಕ ವಚನ ಪ್ರಯೋಗ ಮಾಡುವುದರಿಂದ ರಾಜ್ಯದಲ್ಲಿ ಒಕ್ಕಲಿಗರ ಮತ ಪಡೆಯುವುದು ಕಷ್ಟ ಎನ್ನುವುದು ಕೆಪಿಸಿಸಿ ಅಧ್ಯಕ್ಷರ ವಾದವಾಗಿದೆ. ಜತೆಗೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುವುದು ಸರಿಯಲ್ಲ, ನಮ್ಮದು ಸಾಮೂಹಿಕ ನಾಯಕತ್ವ ಎನ್ನುವುದು ಶಿವಕುಮಾರ್ ಅವರ ಅಭಿಪ್ರಾಯ ಎನ್ನಲಾಗಿದೆ. ಹಾಗಾಗಿ
ರಾಹುಲ್ ಗಾಂಧಿ ಹುಟ್ಟುಹಬ್ಬದ ನಿಮಿತ್ತ ಶುಭ ಕೋರಲು ದೆಹಲಿಗೆ ಹೋಗಿರುವ ಶಿವಕುಮಾರ್ ಅವರು ಜಮೀರ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು