10:35 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್ ಗೆ ದೂರು?

20/06/2021, 08:59

ಬೆಂಗಳೂರು(reporterkarnataka news): ಆಡಳಿತರೂಢ ಬಿಜೆಪಿಯಲ್ಲಿ ಭಿನ್ನಮತ ಸ್ವಲ್ಪ ಮಟ್ಟಿಗೆ ತಣ್ಣಗಾಗುತ್ತಿದ್ದಂತೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಮಾಜಿ ಸಚಿವ ಜಮೀರ್ ಖಾನ್ ವಿಷಯದಲ್ಲಿ ಪಕ್ಷದ ಇಬ್ಬರು ಪ್ರಮುಖ ನಾಯಕರೊಳಗೆ ಮುಸುಕಿನ ಗುದ್ದಾಟ ಆರಂಭವಾಗಿದೆ.

ಜಮೀರ್ ಖಾನ್ ಅವರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಪದೇ ಪದೇ ಹೇಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವುದು ಈ ಎಲ್ಲ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಈ ಕುರಿತು ಜಮೀರ್ ಅವರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ. ಆದರೆ ಜಮೀರ್ ಅವರು ಇದು ಯಾವುದಕ್ಕೂ ಕ್ಯಾರೇ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಮೀರ್
ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಶಿವಕುಮಾರ್ ಅವರು ದೂರು ನೀಡಲಿದ್ದಾರೆ ಎನ್ನಲಾಗಿದೆ.

ಜಮೀರ್ ಖಾನ್ ಅವರು ಹೋದ ಕಡೆಗಳೆಲ್ಲ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ, ಅವರನ್ನು 40 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸುತ್ತೇನೆ ಎಂದು ಹೇಳಿಕೊಳ್ಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿರುವ ಬಗ್ಗೆ ಶಿವಕುಮಾರ್ ತಕರಾರು ಎತ್ತಿದ್ದಾರೆ. ಕುಮಾರಸ್ವಾಮಿ ವಿರುದ್ಧ ಪದೇ ಪದೇ ನಿಂದನಾತ್ಮಕ ಹೇಳಿಕೆ ನೀಡುವುದು, ಏಕ ವಚನ ಪ್ರಯೋಗ ಮಾಡುವುದರಿಂದ ರಾಜ್ಯದಲ್ಲಿ ಒಕ್ಕಲಿಗರ ಮತ ಪಡೆಯುವುದು ಕಷ್ಟ ಎನ್ನುವುದು ಕೆಪಿಸಿಸಿ ಅಧ್ಯಕ್ಷರ ವಾದವಾಗಿದೆ. ಜತೆಗೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುವುದು ಸರಿಯಲ್ಲ, ನಮ್ಮದು ಸಾಮೂಹಿಕ ನಾಯಕತ್ವ ಎನ್ನುವುದು ಶಿವಕುಮಾರ್ ಅವರ ಅಭಿಪ್ರಾಯ ಎನ್ನಲಾಗಿದೆ. ಹಾಗಾಗಿ
ರಾಹುಲ್ ಗಾಂಧಿ ಹುಟ್ಟುಹಬ್ಬದ ನಿಮಿತ್ತ ಶುಭ ಕೋರಲು ದೆಹಲಿಗೆ ಹೋಗಿರುವ ಶಿವಕುಮಾರ್ ಅವರು ಜಮೀರ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು