4:01 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಿಂದ ಹಿಂದೂಗಳ ಮೇಲೆ ದಾಳಿ: ಬಿಜೆಪಿ ವಕ್ತಾರ ನಯನ ತಳವಾರ ಆರೋಪ

23/01/2024, 19:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕನ್ನಡದ ಪುಜಾರಿ. ಕಣ್ಮಣಿ ದೇಶ ಕಂಡ ಧೀಮಂತ ಚಿಂತಕ ಹಿರೇಮಗಳೂರು ಕಣ್ಣನ್ ಸೇರಿದಂತೆ ಅರ್ಚಕರಿಗೆ ಸರ್ಕಾರ ಕೊಟ್ಟ ಸಂಬಳವನ್ನು ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಹಿಂದೂ ಶ್ರದ್ಧಾ ಕೇಂದ್ರ ದೇವಸ್ಥಾನಗಳನ್ನು ಮುಚ್ಚುವ ಕಾಂಗ್ರೆಸ್ ಸರ್ಕಾರದ ಹುನ್ನಾರ ಎಂದು ಬಿಜೆಪಿ ವಕ್ತಾರ ನಯನ ತಳವಾರ ಅರೋಸಿದ್ದಾರೆ.
ಶ್ರೀರಾಮ ದೇವಸ್ಥಾನ ನಿರ್ಮಾಣ ವಿರೋಧಿಸಿ ಪ್ರಾಣ ಪ್ರತಿಷ್ಠಾಪನೆ ಒಂದು ದಿನದ ರಜೆಯನ್ನು ನೀಡದೆ ಮಕ್ಕಳು, ಪೋಷಕರು ಮತ್ತು ಹಿಂದೂಗಳಿಂದ ಶಾಪ ಹಾಕಿಸಿಕೊಳ್ಳುತ್ತಿರುವ ಸಮಯದಲ್ಲೆ ಕನ್ನಡದಲ್ಲೇ ಮಂತ್ರ ಉಚ್ಚಾರಗಳನ್ನು ಇಡೀ ಸಮಾಜಕ್ಕೆ ನೀಡಿ ಈ ಮೂಲಕ ಮದುವೆ, ಪೂಜೆಗಳನ್ನು ಕನ್ನಡ ಮಯಗೋಳಿಸಿ ಶಾಸ್ತ್ರೀಯ ಭಾಷೆಯಾಗಿಸಲು ಸಹಕರಿಸಿದ ಹಿರೇಮಗಳೂರು ಕಣ್ಣನ್ ಇವರಿಗೆ ನಿಮ್ಮ ಕೊದಂಡರಾಮ ದೇವಸ್ಥಾನದಿಂದ ಆದಾಯ ಸರ್ಕಾರಕ್ಕೆ ಬರುತ್ತಿಲ್ಲ ಎಂಬ ಕಾರಣ ನೀಡಿ ಕೊಟ್ಟ ಸಂಬಳ ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಖಂಡನೀಯ. ಸರ್ಕಾರ ರಾಜ್ಯದ ಹಲವು ದೇವಸ್ಥಾನಗಳನ್ನು ಮುಜರಾಯಿ ವ್ಯಾಪ್ತಿಗೆ ಸೇರಿಸಿಕೊಂಡು ಇದಕ್ಕೆ ಒಬ್ಬ ಸಚಿವರನ್ನು ಇಟ್ಟುಕೊಂಡು ಸಾವಿರಾರು ಕೋಟಿ ಹಣವನ್ನು ಹಲವು ದೇವಸ್ಥಾನಗಳಲ್ಲಿ ಭಕ್ತರಿಂದ ಸ್ವೀಕರಿಸಿ ಆ ಹಣವನ್ನು ಅಭಿವೃದ್ಧಿ ಹೆಸರಲ್ಲಿ ಬೇರೆ ದರ್ಮದ ಉದ್ದಾರಕ್ಕೆ ಬಳಸಿಕೊಂಡು ಅದನ್ನು ಕೊಳ್ಳೆ ಹೊಡೆಯುತ್ತಿದ್ದು ಈಗಾಗಲೇ ಸುಬ್ರಮಣ್ಯ. ಕಟೀಲು. ಕೊಲ್ಲೂರು ಮುಂತಾದ ದೇವಸ್ಥಾನಗಳಿಂದ ಬರುತ್ತಿರುವ ದೊಡ್ಡ ಮಟ್ಟದ ಆದಾಯವನ್ನು ಇವರು ವಾಪಸ್ ಅದೇ ದೇವಸ್ಥಾನಕ್ಕೆ ಮತ್ತು ಅರ್ಚಕರ ಸಂಬಳಕ್ಕೆ ನೀಡುತ್ತಾರೆಯೆ ಎಂದು ಪ್ರಶ್ನಿಸುತ್ತಿದ್ದು. ಒಂದು ಇಲಾಖೆ ನಡೆಯಬೇಕೆಂದರೆ ಲಾಭ ಇರುವ ಕಡೆಯಿಂದ ನಷ್ಟವನ್ನು ಬರಿಸಬೇಕು ಎಂಬ ನಿಯಮವನ್ನು ಅರಿಯದಷ್ಟು ಮೂಡರಾಗಿದ್ದು. ಈಗಾಗಲೆ ಪೂಜೆ ಮಾಡಲು ಅರ್ಚಕರು ಸಿಗದಷ್ಷು ವ್ಯವಸ್ಥೆ ಸೃಷ್ಠಿಯಾಗಿದ್ದು. ಬದುಕಲು ಪರದಾಡುತ್ತಿರುವ ಬಡ ದೇವಸ್ಥಾನಗಳ ಅರ್ಚಕರಿಗೆ ಕಾಂಗ್ರೆಸ್ ನೆತೃತ್ವದ ಸರ್ಕಾರ ನೋಟಿಸ್ ನೀಡುತ್ತಿರುವುದು ಶ್ರದ್ಧೆಯ ಹಿಂದೂ ಧರ್ಮದ ದೇವಾಲಯಗಳನ್ನು ಮುಚ್ಚುವ ಹುನ್ನಾರವಾಗಿದ್ದು. ಎನು ಅದಾಯ ಬರದ ಮದ್ರಸಾ. ಮಸೀದಿ ಚರ್ಚ್ ಗಳಿಗೆ ನೀಡುತ್ತಿರುವ ಅನುದಾನ ವಾಪಾಸು ಪಡೆಯಲು ನಿಮಗೆ ಸಾದ್ಯವೆ.. ಕೂಡಲೆ ಸರ್ಕಾರ ಅದೇಶ ವಾಪಾಸು ಹಿಂಪಡೆಯದಿದ್ದಲ್ಲಿ ಮತ್ತು ಅರ್ಚಕರ ಸಂಬಳವನ್ನು ಹೆಚ್ಚು ಮಾಡಬೇಕು. ಬಡ ದೇವಸ್ಥಾನಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಮತ್ತು ನೋಟೀಸ್ ನೀಡಿದ ತಹಶಿಲ್ದಾರ್ ಅನ್ನು ವಜಾಗೋಳಿಸಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು