5:29 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ಸಿನಿಂದಾದ ಅನ್ಯಾಯ ಸರಿಪಡಿಸಲು ಬಾವಾಗೆ ಜೆಡಿಎಸ್ ಟಿಕೆಟ್: ಮಾಜಿ ಪ್ರಧಾನಿ ದೇವೇಗೌಡ

01/05/2023, 19:13

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕರಾಗಿದ್ದಾಗ 168 ಕೋಟಿ ರೂ. ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡದೆ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ಸರಿಪಡಿಸಲು ಜನತಾ ದಳ ಅವರಿಗೆ ಟಿಕೆಟ್ ನೀಡಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಮುಖ್ಯಸ್ಥ ಎಚ್.ಡಿ. ದೇವೇಗೌಡ ಹೇಳಿದರು.
ಸುರತ್ಕಲ್ ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಆಡಳಿತ ಕಾಲದಲ್ಲಿ ರೈತರ ಸಾಲ ಮನ್ನಾ ಮಾಡಲಾಯಿತು. ಮಹಿಳೆಯರು ನೆಮ್ಮದಿಯ ಬದುಕು ಕಂಡರು. ಮಂಗಳೂರು ಉತ್ತರ ಕ್ಷೇತ್ರ ಮೊಯ್ದೀನ್ ಬಾವಾ ಶಾಸಕರಾಗಿದ್ದ ಅವಧಿಯಲ್ಲಿ ಅಭಿವೃದ್ಧಿ ಕಂಡಿತು ಎಂದರು.


ಮಂಗಳೂರು ಉತ್ತರದಲ್ಲಿ ಬಾವಾ ಅವರಿಗೆ ಮೋಸದಿಂದ ಟಿಕೆಟ್ ತಪ್ಪಿಸಲಾಯಿತು. ಇದರ ಹಿಂದಿರುವ ವ್ಯಕ್ತಿಯ ಹೆಸರನ್ನು ನಾನು ಹೇಳುವುದಿಲ್ಲ. ಬಾವಾ ಅವರಿಗಾದ ಅನ್ಯಾಯ ಸರಿಪಡಿಸಲು ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗಿದೆ. ಮೇ 10 ಸಂಜೆ ವರೆಗೆ ನಿಮಗೆ ಅವಕಾಶವಿದೆ. ಬಾವಾ ಅವರನ್ನು ಗೆಲ್ಲಿಸಿ ಎಂದು ಕೈಜೋಡಿಸಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಬಿ. ಸದಾಶಿವ, ಮೂಡುಬಿದ್ರೆ ಅಭ್ಯರ್ಥಿ ಡಾ. ಅಮರಶ್ರೀ ಶೆಟ್ಟಿ, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು