5:31 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆದ್ದರೆ ಅಂಬೇಡ್ಕರ್, ಬಸವಣ್ಣ, ಸೂಫಿ ಸಂತರ ಆಶಯ ಗೆದ್ದಂತೆ: ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ

21/04/2024, 23:37

*ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪದ್ಮರಾಜ್ ಆರ್. ಪೂಜಾರಿ ಸಮುದ್ರವಿದ್ದಂತೆ*

*ಫರಂಗಿಪೇಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ*

ಮಂಗಳೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಗೆದ್ದರೆ ಕನಕದಾಸ, ಬಸವಣ್ಣ, ಸೂಫಿ ಸಂತರ, ಅಂಬೇಡ್ಕರ್ ಅವರ ಆಶಯ ಗೆದ್ದಂತೆ. ಹಾಗಾಗಿ ಪದ್ಮರಾಜ್ ಗೆಲ್ಲಬೇಕು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದರು.
ಫರಂಗಿಪೇಟೆಯಲ್ಲಿ ಭಾನುವಾರ ನಡೆದ ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಪದ್ಮರಾಜ್ ಅವರ ಹಿಂದೆ ಎಲ್ಲಾ ವರ್ಗದ ಜನರೂ ಇದ್ದಾರೆ. ಹಾಗಾಗಿ ಎಲ್ಲಾ ನದಿಗಳು ಸೇರಿ ಸಮುದ್ರವಾದಂತೆ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಮನೆಮನೆಗೆ ತಲುಪಿಸಿ, ಗೆಲ್ಲಿಸಬೇಕು ಎಂದು ಅವರು ನುಡಿದರು.
ಪದ್ಮರಾಜ್ ಆರ್. ಪೂಜಾರಿ ಅವರ ಬಗ್ಗೆ ಎಲ್ಲರಿಗೂ ತಿಳಿದ ವಿಚಾರ. ಎಲ್ಲರನ್ನು ಪ್ರೀತಿಯಿಂದಲೇ ನಡೆಸಿಕೊಡುವ ವ್ಯಕ್ತಿ. ಮತ ಹಾಕದ ಯುವಕನನ್ನು ದ್ವೇಷಿಸಲಾರರು. ಆತನ ಕೈಹಿಡಿದು ಸರಿಯಾದ ದಾರಿಯಲ್ಲಿ ನಡೆಸುವಂತಹ ವ್ಯಕ್ತಿ ಪದ್ಮರಾಜ್. ಇಂತಹ ವ್ಯಕ್ತಿ ಗೆಲ್ಲಲೇಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಬೆಲೆಯೇರಿಕೆಯಿಂದ ತತ್ತರಿಸಿರುವ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರಕಾರ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇಂದು ಐದು ಗ್ಯಾರೆಂಟಿಗಳಿಂದ ಜನರು ಸ್ವಾವಲಂಭಿಯಾಗಿದ್ದಾರೆ. ಮಹಿಳೆಯರು ಆಶಾದಾಯಕ ಜೀವನ ನಡೆಸುತ್ತಿದ್ದಾರೆ. ಜನರನ್ನು ಇನ್ನಷ್ಟು ಸಶಕ್ತರನ್ನಾಗಿಸುವ ಉದ್ದೇಶದಿಂದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡಲಿದ್ದೇವೆ ಎಂದರು.
ಇದೇ ಸಂದರ್ಭ ಗುರುಕಿರಣ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ಚಂದ್ರಪ್ರಕಾಶ್ ಶೆಟ್ಟಿ, ಚಂದ್ರಹಾಸ ಕರ್ಕೇರ, ಡಾ. ಇಫ್ತಿಕಾರ್, ಜಬ್ಬಾರ್, ದ.ಕ.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಅಮರ್ ಆಳ್ವ, ದ.ಕ.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಕೆ.ಸಾಹುಲ್ ಹಮೀದ್, ವೃಂದಾ ಪೂಜಾರಿ, ಲವೀನಾ, ಎಫ್.ಎ.ಖಾದರ್, ರಶೀದಾ ಬಾನು, ಇಕ್ಬಾಲ್ ಸುಜೀರ್, ಎಫ್.ಎಂ.ಬಶೀರ್, ಜಬ್ಬಾರ್ ಮಾರಿಪಳ್ಳ, ಬುಖಾರಿ ಕುಂಪನಮಜಲು, ಹಸನಬ್ಬ ಗುಡ್ಡೆ ಮನೆ, ಮೋನಾಕ, ಸಾಹುಲ್ ಹಮೀದ್, ರಝಾಕ್, ಇಸ್ಮಾಯಿಲ್, ಭಾಸ್ಕರ್ ರೈ, ಇಸಾಕ್, ಮೋನು, ಸಲಾಂ ಮಲ್ಲಿ, ಸಮೀರ್ ಪಜೀರ್, ಇಮ್ತಿಯಾಝ್ ತುಂಬೆ, ಎಐಸಿಸಿ ವೀಕ್ಷಕ ಜೋನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು