4:20 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ರತ್ನಾಕರ್ ಶೆಟ್ಟಿ ಆಯ್ಕೆ

28/12/2025, 11:07

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಕುತೂಹಲ ಮೂಡಿಸಿದ್ದ ತೀರ್ಥಹಳ್ಳಿಯ ಪಟ್ಟಣ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಎರಡು ಪಕ್ಷಗಳಿಂದ ನಾಮಪತ್ರಗಳನ್ನು ಸಲ್ಲಿಸಲಾಗಿತ್ತು. ಬಿಜೆಪಿ ಪಕ್ಷದಿಂದ ಸೊಪ್ಪುಗುಡ್ಡೆ ರಾಘವೇಂದ್ರ ನಾಮಪತ್ರ ಸಲ್ಲಿಸಿದರೆ ಕಾಂಗ್ರೆಸ್ ಪಕ್ಷದಿಂದ ರತ್ನಾಕರ್ ಶೆಟ್ಟಿ ನಾಮಪತ್ರವನ್ನು ಸಲ್ಲಿಸಿದ್ದರು.
ಕಾಂಗ್ರೆಸ್ ಪಕ್ಷದ ಅಭಿಪ್ರಾಯದಿಂದ ಬೇಸರಗೊಂಡ ಜಯಪ್ರಕಾಶ್ ಶೆಟ್ಟಿ ಪಟ್ಟಣ ಪಂಚಾಯಿತಿಗೆ ಬಂದು ವಾಪಾಸ್ ಹೊರ ನಡೆದರು. ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ರತ್ನಾಕರ ಶೆಟ್ಟಿ ಚುನಾವಣೆಯ ಆಧಾರದ ಮೇಲೆ ಅಧ್ಯಕ್ಷ ಸ್ಥಾನವನ್ನ ಪಡೆದರು. ಇಬ್ಬರ ಜಗಳದಿಂದ ಮೂರನೆಯವರಿಗೆ ಲಾಭ ಎಂಬಂತೆ ಕಾಂಗ್ರೆಸ್ ಪಕ್ಷದಲ್ಲಿ ನಡೆದಂತಹ ವೈಮನಸ್ಸಿನಿಂದ ಓರ್ವರಿಗೆ ಜಯ ಸಿಕ್ಕಂತೆ ಆಗಿದೆ.
ಸೊಪ್ಪುಗುಡ್ಡೆ ರಾಘವೇಂದ್ರ ನಾಮಪತ್ರ ಸಲ್ಲಿಸಿದ್ದ ಕಾರಣದಿಂದ ಅದರಲ್ಲೂ ಶಾಸಕರು ಹಾಗೂ ಸಂಸದರು ತೀರ್ಥಹಳ್ಳಿಯಲ್ಲಿ ಇದ್ದ ಕಾರಣದಿಂದ ಕುತೂಹಲ ಮೂಡಿಸಿತ್ತು. ಆದರೆ ಇಬ್ಬರು ಪಟ್ಟಣ ಪಂಚಾಯತ್ ಬಳಿ ಬಾರದ ಹಿನ್ನಲೆ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ 8 ಮತ್ತು ಬಿಜೆಪಿ 6 ಮತಗಳಿಂದ ಕೂಡಿದ್ದು ರತ್ನಾಕರ ಶೆಟ್ಟಿ ಜಯಶಾಲಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು