3:36 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ರತ್ನಾಕರ್ ಶೆಟ್ಟಿ ಆಯ್ಕೆ

28/12/2025, 11:07

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಕುತೂಹಲ ಮೂಡಿಸಿದ್ದ ತೀರ್ಥಹಳ್ಳಿಯ ಪಟ್ಟಣ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಎರಡು ಪಕ್ಷಗಳಿಂದ ನಾಮಪತ್ರಗಳನ್ನು ಸಲ್ಲಿಸಲಾಗಿತ್ತು. ಬಿಜೆಪಿ ಪಕ್ಷದಿಂದ ಸೊಪ್ಪುಗುಡ್ಡೆ ರಾಘವೇಂದ್ರ ನಾಮಪತ್ರ ಸಲ್ಲಿಸಿದರೆ ಕಾಂಗ್ರೆಸ್ ಪಕ್ಷದಿಂದ ರತ್ನಾಕರ್ ಶೆಟ್ಟಿ ನಾಮಪತ್ರವನ್ನು ಸಲ್ಲಿಸಿದ್ದರು.
ಕಾಂಗ್ರೆಸ್ ಪಕ್ಷದ ಅಭಿಪ್ರಾಯದಿಂದ ಬೇಸರಗೊಂಡ ಜಯಪ್ರಕಾಶ್ ಶೆಟ್ಟಿ ಪಟ್ಟಣ ಪಂಚಾಯಿತಿಗೆ ಬಂದು ವಾಪಾಸ್ ಹೊರ ನಡೆದರು. ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ರತ್ನಾಕರ ಶೆಟ್ಟಿ ಚುನಾವಣೆಯ ಆಧಾರದ ಮೇಲೆ ಅಧ್ಯಕ್ಷ ಸ್ಥಾನವನ್ನ ಪಡೆದರು. ಇಬ್ಬರ ಜಗಳದಿಂದ ಮೂರನೆಯವರಿಗೆ ಲಾಭ ಎಂಬಂತೆ ಕಾಂಗ್ರೆಸ್ ಪಕ್ಷದಲ್ಲಿ ನಡೆದಂತಹ ವೈಮನಸ್ಸಿನಿಂದ ಓರ್ವರಿಗೆ ಜಯ ಸಿಕ್ಕಂತೆ ಆಗಿದೆ.
ಸೊಪ್ಪುಗುಡ್ಡೆ ರಾಘವೇಂದ್ರ ನಾಮಪತ್ರ ಸಲ್ಲಿಸಿದ್ದ ಕಾರಣದಿಂದ ಅದರಲ್ಲೂ ಶಾಸಕರು ಹಾಗೂ ಸಂಸದರು ತೀರ್ಥಹಳ್ಳಿಯಲ್ಲಿ ಇದ್ದ ಕಾರಣದಿಂದ ಕುತೂಹಲ ಮೂಡಿಸಿತ್ತು. ಆದರೆ ಇಬ್ಬರು ಪಟ್ಟಣ ಪಂಚಾಯತ್ ಬಳಿ ಬಾರದ ಹಿನ್ನಲೆ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ 8 ಮತ್ತು ಬಿಜೆಪಿ 6 ಮತಗಳಿಂದ ಕೂಡಿದ್ದು ರತ್ನಾಕರ ಶೆಟ್ಟಿ ಜಯಶಾಲಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು