3:24 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ಗೆ ಎಸ್‌ಡಿಪಿಐ ದಯೆಯಲ್ಲಿ ಬದುಕುವ ದುಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ

22/08/2024, 23:32

ಬಂಟ್ವಾಳ(reporterkarnataka.com): ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ ‘ಬಂಟ್ವಾಳ ಕಾಂಗ್ರೆಸ್‌ ‘ಗೆ ಇವತ್ತು ಎಸ್‌ಡಿಪಿಐನ ದಯೆಯಲ್ಲಿ ಬದುಕುವ ಶೋಚನೀಯ ಪರಿಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ ಮಾಡಿದರು.


ಬಂಟ್ವಾಳದಲ್ಲಿ ಇಂದು ಪುರಸಭಾ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣಾ ಫಲಿತಾಂಶದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದ ಕ್ಯಾ. ಚೌಟ ಅವರು, ಕಾಂಗ್ರೆಸ್‌ ಸಹಜವಾಗಿಯೇ ತನ್ನ ಡಿಎನ್‌ಎಗೆ ಅನುಗುಣವಾಗಿ ಎಸ್‌ಡಿಪಿ ಜತೆಗೆ ಮೈತ್ರಿ ಮಾಡಿಕೊಂಡು ಬಂಟ್ವಾಳ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಗೆದ್ದುಕೊಂಡಿದೆ. ಆ ಮೂಲಕ ಕಾಂಗ್ರೆಸ್‌ ತಾವು ಯಾರ ಜತೆಗಿದ್ದೇವೆ ಎನ್ನುವ ಸ್ಪಷ್ಟ ಸಂದೇಶವನ್ನು ಸಮಾಜಕ್ಕೆ ರವಾನಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ನ ಸಖ್ಯ ಯಾರ ಜತೆಗಿದೆ ಎಂಬುದನ್ನು ನಾವು ಹಲವಾರು ವರ್ಷಗಳಿಂದ ಹೇಳಿಕೊಂಡು ಬಂದಿದ್ದೇವೆ. ಆದರೆ, ಬಂಟ್ವಾಳದ ಜನತೆಗೆ ಇವತ್ತು ಇದರ ಅರಿವಾಗಿದೆ. ವಿಶೇಷವಾಗಿ ಪಿಎಫ್‌ಐನ ರಾಜಕೀಯ ಸಂಸ್ಥೆಯಾಗಿರುವ ಎಸ್‌ಡಿಪಿಐ ಕಾಂಗ್ರೆಸ್‌ ಜತೆಗೆ ಖುಲ್ಲಂಖುಲ್ಲಾವಾಗಿ ಹೊಂದಾಣಿಕೆ ಮಾಡಿಕೊಂಡು ಬಂಟ್ವಾಳದ ಮಹಾಜನತೆಗೆ ಮೋಸವನ್ನು ಮಾಡಿರುವ ಕಾಂಗ್ರೆಸ್‌ಗೆ ಈ ಸಂದರ್ಭದಲ್ಲಿ ನಾನು ಏನು ಹೇಳಬೇಕೆಂದು ಗೊತ್ತಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು