4:15 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ಗೆ ಎಸ್‌ಡಿಪಿಐ ದಯೆಯಲ್ಲಿ ಬದುಕುವ ದುಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ

22/08/2024, 23:32

ಬಂಟ್ವಾಳ(reporterkarnataka.com): ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ ‘ಬಂಟ್ವಾಳ ಕಾಂಗ್ರೆಸ್‌ ‘ಗೆ ಇವತ್ತು ಎಸ್‌ಡಿಪಿಐನ ದಯೆಯಲ್ಲಿ ಬದುಕುವ ಶೋಚನೀಯ ಪರಿಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ ಮಾಡಿದರು.


ಬಂಟ್ವಾಳದಲ್ಲಿ ಇಂದು ಪುರಸಭಾ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣಾ ಫಲಿತಾಂಶದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದ ಕ್ಯಾ. ಚೌಟ ಅವರು, ಕಾಂಗ್ರೆಸ್‌ ಸಹಜವಾಗಿಯೇ ತನ್ನ ಡಿಎನ್‌ಎಗೆ ಅನುಗುಣವಾಗಿ ಎಸ್‌ಡಿಪಿ ಜತೆಗೆ ಮೈತ್ರಿ ಮಾಡಿಕೊಂಡು ಬಂಟ್ವಾಳ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಗೆದ್ದುಕೊಂಡಿದೆ. ಆ ಮೂಲಕ ಕಾಂಗ್ರೆಸ್‌ ತಾವು ಯಾರ ಜತೆಗಿದ್ದೇವೆ ಎನ್ನುವ ಸ್ಪಷ್ಟ ಸಂದೇಶವನ್ನು ಸಮಾಜಕ್ಕೆ ರವಾನಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ನ ಸಖ್ಯ ಯಾರ ಜತೆಗಿದೆ ಎಂಬುದನ್ನು ನಾವು ಹಲವಾರು ವರ್ಷಗಳಿಂದ ಹೇಳಿಕೊಂಡು ಬಂದಿದ್ದೇವೆ. ಆದರೆ, ಬಂಟ್ವಾಳದ ಜನತೆಗೆ ಇವತ್ತು ಇದರ ಅರಿವಾಗಿದೆ. ವಿಶೇಷವಾಗಿ ಪಿಎಫ್‌ಐನ ರಾಜಕೀಯ ಸಂಸ್ಥೆಯಾಗಿರುವ ಎಸ್‌ಡಿಪಿಐ ಕಾಂಗ್ರೆಸ್‌ ಜತೆಗೆ ಖುಲ್ಲಂಖುಲ್ಲಾವಾಗಿ ಹೊಂದಾಣಿಕೆ ಮಾಡಿಕೊಂಡು ಬಂಟ್ವಾಳದ ಮಹಾಜನತೆಗೆ ಮೋಸವನ್ನು ಮಾಡಿರುವ ಕಾಂಗ್ರೆಸ್‌ಗೆ ಈ ಸಂದರ್ಭದಲ್ಲಿ ನಾನು ಏನು ಹೇಳಬೇಕೆಂದು ಗೊತ್ತಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು