4:00 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸೇರಲಿರುವ ಸಿ.ಟಿ.ರವಿ ಆಪ್ತ: ಸೇರುವ ಮುನ್ನವೇ ಎಂಎಲ್ ಎ ಟಿಕೆಟ್ ಆಸೆ ಹೊರ ಹಾಕಿದ ಎಚ್.ಡಿ.ತಮ್ಮಯ್ಯ; ಬೆಂಬಲಿಗರೊಂದಿಗೆ ಸಭೆ

17/02/2023, 22:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಕಳೆದ 18 ವರ್ಷದಿಂದ ಬಿಜೆಪಿ ಬ್ಯಾನರ್ ಹಿಡಿದು, ಬಾವುಟ ಕಟ್ಟಿ ವಿವಿಧ ಹುದ್ಧೆಗಳನ್ನ ನಿರ್ವಹಿಸಿದ್ದೇನೆ. ನನಗೂ ಚಿಕ್ಕಮಗಳೂರು ತಾಲೂಕಿನ ಬಿಜೆಪಿ ಟಿಕೆಟ್ ಬೇಕೆಂದು ಹಾಲಿ ಶಾಸಕ ಸಿ.ಟಿ.ರವಿ ವಿರುದ್ಧ ತೊಡೆ ತಟ್ಟಿ ಟಿಕೆಟ್ ಕೇಳಿದ್ದ ನಗರಸಭೆ ಮಾಜಿ ಅಧ್ಯಕ್ಷ ಎಚ್.ಡಿ.ತಮ್ಮಯ್ಯ ಬಿಜೆಪಿಗೆ ಗುಡ್‍ಬೈ ಹೇಳಿ ಕಾಂಗ್ರೆಸ್ ಸೇರಲು ಬೆಂಬಲಿಗರ ಜೊತೆ ಗೌಪ್ಯ ಸಭೆ ನಡೆಸಿದ್ದಾರೆ.
ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಅತೃಪ್ತ ಆಪ್ತರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. ಹೆಚ್.ಡಿ.ತಮ್ಮಯ್ಯ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಲಿಂಗಾಯುತ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ತಮ್ಮಯ್ಯ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದಂತೆ ಬಿಜೆಪಿಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಸಿ.ಟಿ.ರವಿ ವಿರುದ್ಧ ಬದಲಾವಣೆಯ ಸಂಕಲ್ಪ ಯಾತ್ರೆ ಆರಂಭಿಸಿರೋ ಹೆಚ್.ಡಿ.ತಮ್ಮಯ್ಯ ಇದೇ 19ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೂರಾರು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಲಿದ್ದಾರೆ.

ನಿನ್ನೆ ತಾನೇ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಿ.ಟಿ.ರವಿ ಆಪ್ತ ಹೆಚ್.ಡಿ ತಮ್ಮಯ್ಯ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್‍ಗೆ ನಾನು ಯಾವುದೇ ಬೇಡಿಕೆ ಇಲ್ಲದೆ ಸೇರುತ್ತೇನೆ. ಈಗಾಗಲೇ 6 ಜನ ಟಿಕೆಟ್‍ಗಾಗಿ ಅರ್ಜಿ ಹಾಕಿದ್ದಾರೆ. ಗಾಯತ್ರಿ ಶಾಂತೇಗೌಡ ಹಾಕಿಲ್ಲ. ಅವರು ಹಾಗೂ ನನ್ನನ್ನ ಸೇರಿಸಿ ಸರ್ವೇ ಮಾಡಿಸಲಿ. ಎಂಟು ಜನರ ಹೆಸರಿನಲ್ಲೂ ಸರ್ವೇ ಮಾಡಿಸುತ್ತೇವೆ ಎಂದಿದ್ದಾರೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ವೇ ಮಾಡಿಸಿ ಟಿಕೆಟ್ ನೀಡುತ್ತಿದೆ. ಯಾರಿಗೆ ಟಿಕೆಟ್ ಕೊಟ್ಟರೂ ನಾನು ಬೆಂಬಲ ನೀಡಲು ಸಿದ್ಧ. ನನಗೆ ಸಿಕ್ಕರೆ ಎಲ್ಲರೂ ಬೆಂಬಲ ನೀಡಲಿ ಎಂದು ಕೇಳಿಕೊಂಡಿದ್ದಾರೆ. ನನಗೆ ಕಾಂಗ್ರೆಸ್ ಹೊಸದಲ್ಲ.ನಮ್ಮ ತಾತನ ಕಾಲದಿಂದಲೂ ನಾವು ಕಾಂಗ್ರೆಸ್‍ನಲ್ಲೇ ಇರೋದು.2004ರಲ್ಲಿ ಬಿಜೆಪಿ ಸೇರಿದ್ದು. ನಾನು ಬೈ ಬರ್ಥ್ ಕಾಂಗ್ರೆಸ್ ಎಂದಿದ್ದಾರೆ.


ಸರಳವಾಗಿ ಕಾಂಗ್ರೆಸ್ ಸೇರಿ ಎಂದಿದ್ದಾರೆ. ಆದರೆ, ಇಲ್ಲಿ ಸಭೆಯಲ್ಲಿ ಸೇರಿರೋ ಎಲ್ಲರೂ ನಾವು ಬರುತ್ತೇವೆ ಎಂದಿದ್ದಾರೆ. ಇಲ್ಲಿರುವವರು ಎಲ್ಲರೂ ಕೆಪಿಸಿಸಿ ಕಚೇರಿಗೆ ಬಂದರೆ ಎಲ್ಲರೂ ಕಾಂಗ್ರೆಸ್ ಸೇರಿದಂತೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು