6:43 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸೇರಲಿರುವ ಸಿ.ಟಿ.ರವಿ ಆಪ್ತ: ಸೇರುವ ಮುನ್ನವೇ ಎಂಎಲ್ ಎ ಟಿಕೆಟ್ ಆಸೆ ಹೊರ ಹಾಕಿದ ಎಚ್.ಡಿ.ತಮ್ಮಯ್ಯ; ಬೆಂಬಲಿಗರೊಂದಿಗೆ ಸಭೆ

17/02/2023, 22:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಕಳೆದ 18 ವರ್ಷದಿಂದ ಬಿಜೆಪಿ ಬ್ಯಾನರ್ ಹಿಡಿದು, ಬಾವುಟ ಕಟ್ಟಿ ವಿವಿಧ ಹುದ್ಧೆಗಳನ್ನ ನಿರ್ವಹಿಸಿದ್ದೇನೆ. ನನಗೂ ಚಿಕ್ಕಮಗಳೂರು ತಾಲೂಕಿನ ಬಿಜೆಪಿ ಟಿಕೆಟ್ ಬೇಕೆಂದು ಹಾಲಿ ಶಾಸಕ ಸಿ.ಟಿ.ರವಿ ವಿರುದ್ಧ ತೊಡೆ ತಟ್ಟಿ ಟಿಕೆಟ್ ಕೇಳಿದ್ದ ನಗರಸಭೆ ಮಾಜಿ ಅಧ್ಯಕ್ಷ ಎಚ್.ಡಿ.ತಮ್ಮಯ್ಯ ಬಿಜೆಪಿಗೆ ಗುಡ್‍ಬೈ ಹೇಳಿ ಕಾಂಗ್ರೆಸ್ ಸೇರಲು ಬೆಂಬಲಿಗರ ಜೊತೆ ಗೌಪ್ಯ ಸಭೆ ನಡೆಸಿದ್ದಾರೆ.
ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಅತೃಪ್ತ ಆಪ್ತರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. ಹೆಚ್.ಡಿ.ತಮ್ಮಯ್ಯ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಲಿಂಗಾಯುತ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ತಮ್ಮಯ್ಯ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದಂತೆ ಬಿಜೆಪಿಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಸಿ.ಟಿ.ರವಿ ವಿರುದ್ಧ ಬದಲಾವಣೆಯ ಸಂಕಲ್ಪ ಯಾತ್ರೆ ಆರಂಭಿಸಿರೋ ಹೆಚ್.ಡಿ.ತಮ್ಮಯ್ಯ ಇದೇ 19ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೂರಾರು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಲಿದ್ದಾರೆ.

ನಿನ್ನೆ ತಾನೇ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಿ.ಟಿ.ರವಿ ಆಪ್ತ ಹೆಚ್.ಡಿ ತಮ್ಮಯ್ಯ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್‍ಗೆ ನಾನು ಯಾವುದೇ ಬೇಡಿಕೆ ಇಲ್ಲದೆ ಸೇರುತ್ತೇನೆ. ಈಗಾಗಲೇ 6 ಜನ ಟಿಕೆಟ್‍ಗಾಗಿ ಅರ್ಜಿ ಹಾಕಿದ್ದಾರೆ. ಗಾಯತ್ರಿ ಶಾಂತೇಗೌಡ ಹಾಕಿಲ್ಲ. ಅವರು ಹಾಗೂ ನನ್ನನ್ನ ಸೇರಿಸಿ ಸರ್ವೇ ಮಾಡಿಸಲಿ. ಎಂಟು ಜನರ ಹೆಸರಿನಲ್ಲೂ ಸರ್ವೇ ಮಾಡಿಸುತ್ತೇವೆ ಎಂದಿದ್ದಾರೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ವೇ ಮಾಡಿಸಿ ಟಿಕೆಟ್ ನೀಡುತ್ತಿದೆ. ಯಾರಿಗೆ ಟಿಕೆಟ್ ಕೊಟ್ಟರೂ ನಾನು ಬೆಂಬಲ ನೀಡಲು ಸಿದ್ಧ. ನನಗೆ ಸಿಕ್ಕರೆ ಎಲ್ಲರೂ ಬೆಂಬಲ ನೀಡಲಿ ಎಂದು ಕೇಳಿಕೊಂಡಿದ್ದಾರೆ. ನನಗೆ ಕಾಂಗ್ರೆಸ್ ಹೊಸದಲ್ಲ.ನಮ್ಮ ತಾತನ ಕಾಲದಿಂದಲೂ ನಾವು ಕಾಂಗ್ರೆಸ್‍ನಲ್ಲೇ ಇರೋದು.2004ರಲ್ಲಿ ಬಿಜೆಪಿ ಸೇರಿದ್ದು. ನಾನು ಬೈ ಬರ್ಥ್ ಕಾಂಗ್ರೆಸ್ ಎಂದಿದ್ದಾರೆ.


ಸರಳವಾಗಿ ಕಾಂಗ್ರೆಸ್ ಸೇರಿ ಎಂದಿದ್ದಾರೆ. ಆದರೆ, ಇಲ್ಲಿ ಸಭೆಯಲ್ಲಿ ಸೇರಿರೋ ಎಲ್ಲರೂ ನಾವು ಬರುತ್ತೇವೆ ಎಂದಿದ್ದಾರೆ. ಇಲ್ಲಿರುವವರು ಎಲ್ಲರೂ ಕೆಪಿಸಿಸಿ ಕಚೇರಿಗೆ ಬಂದರೆ ಎಲ್ಲರೂ ಕಾಂಗ್ರೆಸ್ ಸೇರಿದಂತೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು