8:57 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮತಗಳ್ಳತನಕ್ಕೆ ಸಾಕ್ಷಿ ಇಟ್ಟುಕೊಂಡು ಆಯೋಗಕ್ಕೆ ದೂರು ನೀಡಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

10/08/2025, 23:42

ಹಾವೇರಿ(reporterkarnataka.com): ಮತ‌ಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ಸಾಕ್ಷಿ, ಆಧಾರ ಇಟ್ಟುಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲಿ, ಈ ಬಗ್ಗೆ ತನಿಖೆ ಆಗಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕತ್ತಲಲ್ಲಿ ಕಾಣದೇ ಇರುವ ಕರಿಬೆಕ್ಕು ಹುಡುಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ವಿಷ್ಣುವರ್ಧನ್ ಸ್ಮಾರಕ ತೆರವು ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಷ್ಣುವರ್ಧನ್ ಬಗ್ಗೆ ಅಭಿಮಾನ ಇದೆ. ರಾತ್ರೋರಾತ್ರಿ ಅವರ ಸ್ಮಾರಕ ತೆರವು ಮಾಡಿದ್ದು ದುಃಖ ತಂದಿದೆ ಎಂದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ಮೈಸೂರಿನಲ್ಲಿ ವಿಷ್ಣು ಸ್ಮಾರಕ ಉದ್ಘಾಟನೆ ಮಾಡಿದ್ದೇವು. ಅದಕ್ಕೆ 12 ಕೋಟಿ ರೂ ಕೊಡಲಾಗಿತ್ತು. ಈ ಸಮಸ್ಯೆ ಸೌಹಾರ್ದ ರೀತಿ ಬಗೆಹರಿಸುವುದು ಸೂಕ್ತ ಅಂತ ನನ್ನ ಅಭಿಪ್ರಾಯ ಎಂದು ಹೇಳಿದರು.

*ನದಿ ಜೋಡಣೆ:*
ಹಾವೇರಿ, ಗದಗ, ಕೊಪ್ಪಳ, ರಾಯಚೂರು ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇದೆ. ಜಲಾನಯನ ಪ್ರದೇಶದಲ್ಲಿ ಹಲವು ಕುಡಿಯುವ ನೀರಿನ ಯೋಜನೆ‌ಗಳಿವೆ. ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಆಗುತ್ತದೆ. ನೀರಿನ ಕೊರತೆ ತುಂಬಿಕೊಡಲು ಬೇಡ್ತಿ-ವರದಾ ನದಿ‌ ಜೋಡಣೆ ಯೋಜನೆ ಮಾಡುವ ಉದ್ದೇಶವಿದೆ ಎಂದು ಹೇಳಿದರು.
ಈ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯವರಿಗೆ ಪರಿಸರದ ಸಮಸ್ಯೆ, ಜೀವ ವೈವಿಧ್ಯಕ್ಕೆ ಸಮಸ್ಯೆ ಆಗುತ್ತದೆ ಅಂತ ಹಿಂದೆಲ್ಲಾ ಚರ್ಚೆ ಆಗಿದ್ದವು. ನಾನು ಮೊನ್ನೆ ಕೇಂದ್ರ ಸಚಿವರಾದ ಸಿ.ಆರ್.ಪಾಟೀಲ್, ಸೋಮಣ್ಣ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ವರದಾ ಬೇಡ್ತಿ ಯೋಜನೆಗೆ ಒಪ್ಪಿಗೆ ಕೊಡಲು ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ. ಕೆಲವೇ ದಿನಗಳಲ್ಲಿ ಒಳ್ಳೆ ಸುದ್ದಿ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಡಿಪಿಆರ್ ಕಳಿಸಿದರೆ ಮುಂದಿನ ಪ್ರಕ್ರಿಯೆ ಆಗುತ್ತದೆ. ವರದಾ, ಧರ್ಮ, ಬೇಡ್ತಿ ನದಿ ನೀರಿನ ಲಿಂಕ್ ರಾಜ್ಯ ಸರ್ಕಾರದ ವಲಯದಲ್ಲಿ ತಗೋಬೇಕು. ನೀರಾವರಿ ಯೋಜನೆ ಜಾರಿ ಅಷ್ಟು ಸುಲಭ ಅಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಲು ಇಂದು ಸಭೆ ನಡೆಸಿದ್ದೇವೆ ಎಂದು ನುಡಿದರು.
ಬೆಡ್ತಿ ವರದಾ ನದಿ ಜೋಡಣೆ ಯೋಜನೆಗೆ ಶಾಸಕ ಶಿವರಾಮ ಹೆಬ್ಬಾರ್ ವಿರೋಧಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ಜನರ ಬದುಕು ಹಾಳಾಗುವುದಿಲ್ಲ. ಯೋಜನೆಯಲ್ಲಿ ಬದಲಾವಣೆ ಆಗಿದೆ. ಅವರನ್ನೂ ಒಪ್ಪಿಸಿ ಅನುಕೂಲ ಆಗುವ ರೀತಿ ಮಾಡುತ್ತೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು