7:42 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮತಗಳ್ಳತನಕ್ಕೆ ಸಾಕ್ಷಿ ಇಟ್ಟುಕೊಂಡು ಆಯೋಗಕ್ಕೆ ದೂರು ನೀಡಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

10/08/2025, 23:42

ಹಾವೇರಿ(reporterkarnataka.com): ಮತ‌ಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ಸಾಕ್ಷಿ, ಆಧಾರ ಇಟ್ಟುಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲಿ, ಈ ಬಗ್ಗೆ ತನಿಖೆ ಆಗಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕತ್ತಲಲ್ಲಿ ಕಾಣದೇ ಇರುವ ಕರಿಬೆಕ್ಕು ಹುಡುಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ವಿಷ್ಣುವರ್ಧನ್ ಸ್ಮಾರಕ ತೆರವು ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಷ್ಣುವರ್ಧನ್ ಬಗ್ಗೆ ಅಭಿಮಾನ ಇದೆ. ರಾತ್ರೋರಾತ್ರಿ ಅವರ ಸ್ಮಾರಕ ತೆರವು ಮಾಡಿದ್ದು ದುಃಖ ತಂದಿದೆ ಎಂದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ಮೈಸೂರಿನಲ್ಲಿ ವಿಷ್ಣು ಸ್ಮಾರಕ ಉದ್ಘಾಟನೆ ಮಾಡಿದ್ದೇವು. ಅದಕ್ಕೆ 12 ಕೋಟಿ ರೂ ಕೊಡಲಾಗಿತ್ತು. ಈ ಸಮಸ್ಯೆ ಸೌಹಾರ್ದ ರೀತಿ ಬಗೆಹರಿಸುವುದು ಸೂಕ್ತ ಅಂತ ನನ್ನ ಅಭಿಪ್ರಾಯ ಎಂದು ಹೇಳಿದರು.

*ನದಿ ಜೋಡಣೆ:*
ಹಾವೇರಿ, ಗದಗ, ಕೊಪ್ಪಳ, ರಾಯಚೂರು ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇದೆ. ಜಲಾನಯನ ಪ್ರದೇಶದಲ್ಲಿ ಹಲವು ಕುಡಿಯುವ ನೀರಿನ ಯೋಜನೆ‌ಗಳಿವೆ. ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಆಗುತ್ತದೆ. ನೀರಿನ ಕೊರತೆ ತುಂಬಿಕೊಡಲು ಬೇಡ್ತಿ-ವರದಾ ನದಿ‌ ಜೋಡಣೆ ಯೋಜನೆ ಮಾಡುವ ಉದ್ದೇಶವಿದೆ ಎಂದು ಹೇಳಿದರು.
ಈ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯವರಿಗೆ ಪರಿಸರದ ಸಮಸ್ಯೆ, ಜೀವ ವೈವಿಧ್ಯಕ್ಕೆ ಸಮಸ್ಯೆ ಆಗುತ್ತದೆ ಅಂತ ಹಿಂದೆಲ್ಲಾ ಚರ್ಚೆ ಆಗಿದ್ದವು. ನಾನು ಮೊನ್ನೆ ಕೇಂದ್ರ ಸಚಿವರಾದ ಸಿ.ಆರ್.ಪಾಟೀಲ್, ಸೋಮಣ್ಣ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ವರದಾ ಬೇಡ್ತಿ ಯೋಜನೆಗೆ ಒಪ್ಪಿಗೆ ಕೊಡಲು ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ. ಕೆಲವೇ ದಿನಗಳಲ್ಲಿ ಒಳ್ಳೆ ಸುದ್ದಿ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಡಿಪಿಆರ್ ಕಳಿಸಿದರೆ ಮುಂದಿನ ಪ್ರಕ್ರಿಯೆ ಆಗುತ್ತದೆ. ವರದಾ, ಧರ್ಮ, ಬೇಡ್ತಿ ನದಿ ನೀರಿನ ಲಿಂಕ್ ರಾಜ್ಯ ಸರ್ಕಾರದ ವಲಯದಲ್ಲಿ ತಗೋಬೇಕು. ನೀರಾವರಿ ಯೋಜನೆ ಜಾರಿ ಅಷ್ಟು ಸುಲಭ ಅಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಲು ಇಂದು ಸಭೆ ನಡೆಸಿದ್ದೇವೆ ಎಂದು ನುಡಿದರು.
ಬೆಡ್ತಿ ವರದಾ ನದಿ ಜೋಡಣೆ ಯೋಜನೆಗೆ ಶಾಸಕ ಶಿವರಾಮ ಹೆಬ್ಬಾರ್ ವಿರೋಧಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ಜನರ ಬದುಕು ಹಾಳಾಗುವುದಿಲ್ಲ. ಯೋಜನೆಯಲ್ಲಿ ಬದಲಾವಣೆ ಆಗಿದೆ. ಅವರನ್ನೂ ಒಪ್ಪಿಸಿ ಅನುಕೂಲ ಆಗುವ ರೀತಿ ಮಾಡುತ್ತೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು