10:56 PM Thursday14 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಗೆ ಸೋಲುವ ಭೀತಿ ಎದುರಾಗಿದೆ; 20 ದಿನದೊಳಗೆ ಮುಖ್ಯಮಂತ್ರಿ ರಾಜೀನಾಮೆ: ಸಂಡೂರಿನಲ್ಲಿ ಯಡಿಯೂರಪ್ಪ

08/11/2024, 19:12

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಾಂಗ್ರೆಸ್ ಗೆ ಸೋಲುವ ಭೀತಿ ಬಂದಿದೆ.‌ ಮುಡಾ ಹಗರಣದಲ್ಲಿ ಸಿಎಂ ಸಿಲುಕಿ ಒದ್ದಾಡ್ತಿದ್ದಾರೆ. 15-20 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಹೇಳಿದರು.
ಶುಕ್ರವಾರ ಸಂಡೂರಿನ ಚೋರನೂರು‌ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಪ್ರಚಾರದ ವೇಳೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ನಾಳೆಯೂ ನಾನು ಸಂಡೂರಿನಲ್ಲೇ ಇರ್ತಿನಿ ಮೋದಿಯವರ ವರ್ಚಸ್ಸು ನಮಗೆ ಅನುಕೂಲವಾಗಲಿದೆ.ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಎಫ್ಐಆರ್ ಆಗಿದೆ, ಆಗಲಿ ಬಿಡಿ ಎದುರಿಸೋಣ ಎಂದರು.
ಮೂರು ವಿಧಾನ ಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಚಾರ ಮಾಡ್ತಿದ್ದೇನೆ. ಸಂಡೂರಿನಲ್ಲಿ ನಿರೀಕ್ಷೆ ಮೀರಿ ಬೆಂಬಲ ಸಿಗುತ್ತಿದ್ದು, ಜನಾರ್ದನ ರೆಡ್ಡಿ- ಶ್ರೀರಾಮುಲು ಜೋಡಿ ಅಭ್ಯರ್ಥಿಗೆ ಹೆಚ್ಚು ಶಕ್ತಿ ನೀಡಿದೆ ಎಂದು ಹೇಳಿದರು.

ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ಸಿಎಂ ಸಿದ್ದರಾಮಯ್ಯ ‌ ಸೇರಿ, ಕ್ಯಾಬಿನೆಟ್ ಇಲ್ಲೇ ಇದೆ ಎಂಬ ವಿಚಾರ ಅದನ್ನು ನೀವೇ ಅರ್ಥ ಮಾಡಿಕೊಳ್ಳಿ. ಮುಡಾ ಹಗರಣ ಆರೋಪ ಸಾಬಿತಾಗ್ತದೆ ಅಂತ ಇಡಿ, ಸಿಬಿಐ ಮೇಲೆ ಸಿಎಂ ಸಿದ್ದರಾಮಯ್ಯ ಅಪಪ್ರಚಾರ ಮಾಡ್ತಿದಾರೆ. ಸಿಬಿಐ ಎಫ್ಐಆರ್ ಮಾಡಬೇಕು, ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ವಕ್ಪ್ ಬೋರ್ಡ್ ವಿಚಾರದಲ್ಲಿ ಜಂಟಿ ಸದನ ಸಮಿತಿ ತನ್ನ ಕೆಲಸ ಮಾಡ್ತಿದೆ ವಕ್ಪ್ , ಮುಡಾ ವಿಚಾರದಲ್ಲಿ ಅವರಿಗೆ ಆರೋಪ ಸಾಬಿತಾಗುತ್ತದೆ , ಅವರಿಗೆ ಭಯ ಶುರುವಾಗಿದೆ ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ವಿ.ಸುನೀಲ್ ಕುಮಾರ, ಭೈರತಿ ಬಸವರಾಜ, ಸತೀಶ ರೆಡ್ಡಿ, ಆಂಧ್ರ ಪ್ರದೇಶದ ಶಾಸಕರಾದ ಸುಧಾಕರ ರೆಡ್ಡಿ, ಮಾಜಿ ಶಾಸಕರಾದ ರೇಣುಕಾಚಾರ್ಯ, ತಿಪ್ಪೇಸ್ವಾಮಿ, ರಾಮಚಂದ್ರ ರೆಡ್ಡಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಕೆ.ಎಸ್.ದಿವಾಕರ, ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ, ಹಿರಿಯರಾದ ಟಿ.ಕೃಷ್ಣಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು