7:57 AM Saturday19 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಟಿಕೆಟ್: ಸುಳ್ಯದಲ್ಲಿ ತಣ್ಣಗಾಗದ ಬಂಡಾಯದ ಬಿಸಿ; ಅಭ್ಯರ್ಥಿ ಬದಲಾಯಿಸಲು ಮತ್ತೆ ಹಕ್ಕೊತ್ತಾಯ

09/04/2023, 13:19

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಹೊರಗಿನ ಬಿಸಿಲ ಝಳದೊಂದಿಗೆ ಸುಳ್ಯದಲ್ಲಿ ಚುನಾವಣೆ ಕಾವು ಏರತೊಡಗಿದೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟರೂ ಆಂತರಿಕ ವೈರುಧ್ಯದಿಂದ ಪಕ್ಷದೊಳಗೆ ಸ್ಪರ್ಧೆ ತೀವ್ರಗೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಬದಲಾವಣೆಯ ಕೂಗು ಕೇಳಿ ಬರುತ್ತಿದ್ದರೆ, ಕಾಂಗ್ರೆಸ್ ನಲ್ಲಿ ಬಂಡಾಯ ಬಿಸಿ ಜೋರಾಗಿಯೇ ಇದೆ.
ಸುಳ್ಯ ಮೀಸಲು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಪಕ್ಷದೊಳಗೆ ಫೈಟ್ ಜೋರಾಗಿಯೇ ನಡೆದಿತ್ತು. ಜಿ. ಕೃಷ್ಣಪ್ಪ ಅವರಿಗೆ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಿಸಲಾಗಿತ್ತು. ಆದರೆ ಕಾಂಗ್ರೆಸ್ ನ ಇನ್ನೊಬ್ಬ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ನಂದ ಕುಮಾರ್ ಇದನ್ನು ತೀವ್ರವಾಗಿ ಖಂಡಿಸಿದ್ದರು. ನಂದ ಕುಮಾರ್ ಅಭಿಮಾನಿಗಳು ಸುಮಾರು ಒಂದು ಡಜನಿಗೂ ಹೆಚ್ಚು ಬಸ್ಸಿನಲ್ಲಿ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ಕೂಡ ನಡೆಸಿದ್ದರು. ಆದರೆ ವಿಷಯ ಅಲ್ಲಿಗೆ ಮುಗಿಯಲಿಲ್ಲ. ಸದ್ಯದ ಪರಿಸ್ಥಿತಿ ಅವಲೋಕಿಸುವಾಗ ಬಂಡಾಯದ ಕಾವು ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಕೃಷ್ಣಪ್ಪ ಅವರಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ, ನಂದಕುಮಾರ್ ಅಭಿಮಾನಿ ಬಳಗದಿಂದ ಪ್ರತಿಭಟನೆ ಮುಂದುವರಿದಿದೆ.

ಕಡಬ ಹಾಗೂ ಸುಳ್ಯ ಭಾಗದಿಂದ ಡಜನಿಗೂ ಅಧಿಕ ಬಸ್ ಗಳಲ್ಲಿ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಂದ ನಂದಕುಮಾರ್ ಅಭಿಮಾನಿಗಳು ಒಂದು ರೀತಿಯಲ್ಲಿ ಕೆಪಿಸಿಸಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಇದೀಗ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್
ನೀಡಬೇಕು ಎಂದು ಪಟ್ಟು ಹಿಡಿದಿರುವ ಕಾರ್ಯಕರ್ತರು ಭಾನುವಾರ ಸುಳ್ಯ ವಿಧಾನಸಭಾ ಕ್ಷೇತ್ರದ ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ಸಭಾಂಗಣದ ಸುತ್ತ ಜಮಾವಣೆ ಆಗುತ್ತಿದ್ದಾರೆ. ಮಧ್ಯಾಹ್ನ 3ರ ಬಳಿಕ ಕಡಬ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ನಂದಕುಮಾರ್ ಅಭಿಮಾನಿ ಬಳಗದವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಎರಡು ಬ್ಲಾಕ್ ನಿಂದ 2 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದರೊಂದಿಗೆ ಸುಳ್ಯ ಕಾಂಗ್ರೆಸ್ ನಲ್ಲಿ ಕಾಣಿಸಿಕೊಂಡ ಬಂಡಾಯದ ಕಿಡಿ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಕಾರ್ಯಕರ್ತರಲ್ಲಿ ಯಾವುದೇ ಚರ್ಚೆ ಮಾಡದೇ ಜಿಲ್ಲಾ ನಾಯಕರು, ರಾಜ್ಯ ನಾಯಕರು ಏಕಾಏಕಿಯಾಗಿ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ
ಎಂದು ಸ್ಥಳೀಯ ಕಾರ್ಯಕರ್ತರು ರಿಪೋರ್ಟರ್ ಕರ್ನಾಟಕದ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗ ಘೋಷಣೆ ಮಾಡಿರುವ ಅಭ್ಯರ್ಥಿಯನ್ನು ಬದಲಾವಣೆ ಮಾಡಲೇಬೇಕು ಎಂದು ಹಠಕ್ಕೆ ಕಾರ್ಯಕರ್ತರು ಬಿದ್ದಿದ್ದಾರೆ. ಬಂಡಾಯ ಕಂಡು ಬಂದಲ್ಲೆಲ್ಲ ಕೆಪಿಸಿಸಿ ನಿಮ್ಮ ಕೆಲಸ ಮುಂದುವರಿಸಿ ಎಂದು ಟಿಕೆಟ್ ದೊರೆತ ಅಭ್ಯರ್ಥಿ ಗಳಿಗೆ ಸೂಚನೆ ನೀಡಿದೆ. ಆದರೆ ಮತ ಚಲಾಯಿಸುವವರು ಸ್ಥಳೀಯ ಮತದಾರರು ಎನ್ನುವ ಕಲ್ಪನೆ ಕೆಪಿಸಿಸಿಗೆ ಇದ್ದ ಹಾಗೆ ಕಾಣಿಸುತ್ತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು