1:53 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಓಟ್ ಕೇಳೋಕೆ ಬಂದ್ರೆ “ನಾಯಿ ಬಿಡ್ತೀವಿ”: ಬಜರಂಗದಳ ಮನೆಯಲ್ಲಿ ಎಚ್ಚರಿಕೆ ಬೋರ್ಡ್

02/05/2023, 17:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮಲೆನಾಡ ಮನೆಗಳ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ಅವರ ಮೇಲೆ ನಾಯಿ ಬಿಡಲಾಗುವುದು ಎಚ್ಚರ ಎಂಬ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಬಜರಂಗ ದಳವನ್ನ ನಿಷೇಧ ಮಾಡುತ್ತೇವೆ ಎಂದ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕೆಂಡವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಎಂಬ ಗ್ರಾಮದಲ್ಲಿ ಅರುಣ್ ಎಂಬ ಭಜರಂಗದಳ ಕಾರ್ಯಕರ್ತ ತಮ್ಮ ಮನೆ ಮುಂದೆ ಬೋರ್ಡ್ ಹಾಕಿ ಮತ ಕೇಳಲು ಬರುವ ಕಾಂಗ್ರೆಸ್ಸಿಗರಿಗೆ ಎಚ್ಚರಿಕೆ ನೀಡಿದ್ದಾರೆ. ಇದು ಬಜರಂಗದಳದವರ ಮನೆ. ಕಾಂಗ್ರೆಸಿಗರು ಮತ ಕೇಳಲು ಅವಕಾಶವಿಲ್ಲ. ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ನಾಯಿ ಬಿಡಲಾಗುವುದು ಎಚ್ಚರ ಎಂದು ಬೋರ್ಡ್ ಹಾಕಿದ್ದಾರೆ. ಕಾಫಿನಾಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಬಲಿಷ್ಠವಾಗಿದೆ.


ದತ್ತಪೀಠದ ಹೋರಾಟ ಆರಂಭಗೊಂಡ ಮೇಲೆ ಮಲೆನಾಡು ಭಾಗದಲ್ಲಿ ಹಿಂದೂ ಸಂಘಟನೆ ಮತ್ತಷ್ಟು ಗಟ್ಟಿಯಾಗಿತ್ತು. ಇದೀಗ, ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಕೆಂಡವಾಗಿರೋ ಬಜರಂಗದಳ ನಾನಾ ರೀತಿ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದೆ. ಕಾಂಗ್ತೆಸ್ಸಿನ ಈ ಪ್ರಣಾಳಿಕೆ ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಂಗ್ರೆಸ್ಸಿಗೆ ಮುಳ್ಳಾಗೋದು ಗ್ಯಾರಂಟಿ.

ಇತ್ತೀಚಿನ ಸುದ್ದಿ

ಜಾಹೀರಾತು