9:25 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಓಟ್ ಕೇಳೋಕೆ ಬಂದ್ರೆ “ನಾಯಿ ಬಿಡ್ತೀವಿ”: ಬಜರಂಗದಳ ಮನೆಯಲ್ಲಿ ಎಚ್ಚರಿಕೆ ಬೋರ್ಡ್

02/05/2023, 17:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮಲೆನಾಡ ಮನೆಗಳ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ಅವರ ಮೇಲೆ ನಾಯಿ ಬಿಡಲಾಗುವುದು ಎಚ್ಚರ ಎಂಬ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಬಜರಂಗ ದಳವನ್ನ ನಿಷೇಧ ಮಾಡುತ್ತೇವೆ ಎಂದ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕೆಂಡವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಎಂಬ ಗ್ರಾಮದಲ್ಲಿ ಅರುಣ್ ಎಂಬ ಭಜರಂಗದಳ ಕಾರ್ಯಕರ್ತ ತಮ್ಮ ಮನೆ ಮುಂದೆ ಬೋರ್ಡ್ ಹಾಕಿ ಮತ ಕೇಳಲು ಬರುವ ಕಾಂಗ್ರೆಸ್ಸಿಗರಿಗೆ ಎಚ್ಚರಿಕೆ ನೀಡಿದ್ದಾರೆ. ಇದು ಬಜರಂಗದಳದವರ ಮನೆ. ಕಾಂಗ್ರೆಸಿಗರು ಮತ ಕೇಳಲು ಅವಕಾಶವಿಲ್ಲ. ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ನಾಯಿ ಬಿಡಲಾಗುವುದು ಎಚ್ಚರ ಎಂದು ಬೋರ್ಡ್ ಹಾಕಿದ್ದಾರೆ. ಕಾಫಿನಾಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಬಲಿಷ್ಠವಾಗಿದೆ.


ದತ್ತಪೀಠದ ಹೋರಾಟ ಆರಂಭಗೊಂಡ ಮೇಲೆ ಮಲೆನಾಡು ಭಾಗದಲ್ಲಿ ಹಿಂದೂ ಸಂಘಟನೆ ಮತ್ತಷ್ಟು ಗಟ್ಟಿಯಾಗಿತ್ತು. ಇದೀಗ, ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಕೆಂಡವಾಗಿರೋ ಬಜರಂಗದಳ ನಾನಾ ರೀತಿ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದೆ. ಕಾಂಗ್ತೆಸ್ಸಿನ ಈ ಪ್ರಣಾಳಿಕೆ ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಂಗ್ರೆಸ್ಸಿಗೆ ಮುಳ್ಳಾಗೋದು ಗ್ಯಾರಂಟಿ.

ಇತ್ತೀಚಿನ ಸುದ್ದಿ

ಜಾಹೀರಾತು