6:44 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ: ಬಿಪಿನಚಂದ್ರ ಪಾಲ್ ನಕ್ರೆ

11/10/2023, 21:34

ಉಡುಪಿ(reporterkarnataka.com): ಕಾಶ್ಮೀರವಾಗಲಿ, ಪ್ಯಾಲೆಸ್ತೈನ್ ಆಗಲಿ ಅಥವಾ ಅಫಘಾನಿಸ್ತಾನವೇ ಆಗಲಿ ಕಾಂಗ್ರೆಸ್ ಯಾವತ್ತೂ ಮಾನವ ಹಕ್ಕು,ಸ್ವಾಯತ್ತತೆ ಮತ್ತು ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
ಕಾರ್ಕಳ ಶಾಸಕ, ಮಾಜಿ ಸಚಿವ ಸುನೀಲ್ ಕುಮಾರ್ ನೀಡಿದ ಹೇಳಿಕೆಯೊಂದಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಕ್ರಿಯಿಸಿದ.
ಇತಿಹಾಸ ಅರಿಯದವರಿಗೆ ವರ್ತಮಾನವು ಕೇವಲ ವಿಪ್ಲವವಾಗಿ ಕಾಣುತ್ತದೆ. ಪ್ಯಾಲೇಸ್ತೈನ್ ಮತ್ತು ಇಸ್ರೇಲ್ ಸಂಘರ್ಷ 60 ವರ್ಷಕ್ಕೂ ಹೆಚ್ಚಿನ ಇತಿಹಾಸವನ್ನು ಹೊಂದಿದೆ. ಫ್ಯಾಲೇಸ್ತೈನಿನ ಸ್ವಾಯತ್ತತೆಯೊಂದಿಗಿನ ಇಸ್ರೇಲಿನ ಸೌಹಾರ್ದಯುತ ರಾಜತಾಂತ್ರಿಕ ಸಂಬಂಧಕ್ಕಾಗಿ, ಗಾಂಧೀಜಿ ಪ್ರತಿಪಾದಿಸಿದ ಅಹಿಂಸಾ ತತ್ವ ಸಿದ್ಧಾಂತದಡಿ ತನ್ನ ಬದುಕನ್ನೆ ಪಣವಿಟ್ಟು ಹೋರಾಡಿದ ಪಿಎಲ್ಒ ನಾಯಕ ದಿ. ಯಾಸರ್ ಅರಾಫತ್ ಹೋರಾಟದ ಐತಿಹಾಸಿಕತೆಯ ನೈಜ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಕಾರ್ಯಕಾರಿಣಿಯಲ್ಲಿ ಪ್ಯಾಲೇಸ್ತೈನಿಯನ್ನರ ಬದುಕಿನ ಕಷ್ಟಕಾಲದಲ್ಲಿ ನಾವಿದ್ದೇವೇ ಎಂದಿದೆ. ಅದರೊಂದಿಗೆ ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿಯನ್ನು ಸ್ಪಷ್ಟ ಶಬ್ದಗಳಿಂದ ಖಂಡಿಸಿದೆ. ಅಷ್ಟಕ್ಕೂ ಅರಬ್ ರಾಷ್ಟ್ರಗಳ ಮುನಿಸಿನ ಪ್ರತಿರೋಧದ ಹೊರತಾಗಿಯೂ ಇಸ್ರೇಲಿನೊಂದಿಗೆ ಭಾರತ ರಾಜತಾಂತ್ರಿಕ ಸಂಬಂಧವನ್ನು ಬೆಳೆಸಿ ರಾಯಭಾರಿಗಳ ನೇಮಕಾತಿ ಮಾಡಿದ್ದೇ ಕಾಂಗ್ರೆಸ್ ಆಡಳಿತದಲ್ಲಿ. ಪ್ರಧಾನಿ ದಿ. ನರಸಿಂಹ ರಾವ್ ಅವಧಿಯಲ್ಲಿ ಎನ್ನುವುದು ಬಹುಶ ಬಿಜೆಪಿ ನಾಯಕರಿಗೆ ತಿಳಿದಿಲ್ಲ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಕಾಂಗ್ರೆಸ್ ತನ್ನ 70 ವರ್ಷಗಳ ಆಡಳಿತಾವಧಿಯಲ್ಲಿ ದಿ. ಪ್ರಧಾನಿ ಜವಾಹರಲಾಲ್ ನೆಹರು ವಿಶ್ವ ರಾಜತಾಂತ್ರಿಕತೆಗೆ ಪರಿಚಯಿಸಿದ ಪಂಚಶೀಲ ತತ್ವ, ನಿರ್ಲಿಪ್ತ ಧೋರಣೆಯ ತಳಹದಿಯ ಮೇಲೆ ವಿಶ್ವದ ಶಾಂತಿ ಸೌಹಾರ್ದತೆಗೆ ನೀಡಿದ ಕೊಡುಗೆ ಅಪಾರ. ವಿಶ್ವದ ಎದುರು ಉಗ್ರವಾದದ ವಿರುದ್ಧ ಮಾತಾಡುತ್ತಲೆ ಮನೆಯಲ್ಲಿ ಧರ್ಮದ ಬೇರು ಅಗೆದು ರಾಜಕೀಯ ಮಾಡುವ ಬಿಜೆಪಿಗೆ ಕಾಂಗ್ರೆಸ್ ಪಕ್ಷದ ಉದಾರವಾದದ ಸೃಜನಶೀಲ ರಾಜನೀತಿ ಅರ್ಥ ಆಗಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು