10:09 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಯುವ ಮುಖಂಡರಿಂದ ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತರಣೆ

03/06/2021, 19:17

ಅಥಣಿ(reporterkarnataka news): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಇಲ್ಲದಂತಾಗಿದ್ದು ಜನರ ಬಗ್ಗೆ ಕಾಳಜಿ ಮಾಡದೆ ತಮ್ಮ ವೈಯಕ್ತಿಕ ಕೆಲಸಗಳಿಗಾಗಿ ತೊಡಗುತ್ತಿರುವ ಸರ್ಕಾರವಾಗಿದೆ ಎಂದು ರಾಯಬಾಗ್ ಕಾಂಗ್ರೆಸ್ ಯುವ ಮುಖಂಡ ಯಲ್ಲಪ್ಪ ವೈ ಶಿಂಗಿ ಹೇಳಿದರು.ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಕುಡಚಿ ಮತಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಈ ಕೊರೊನಾ ದುಸ್ಥಿತಿಯಲ್ಲಿ ಜನರ ಬಗ್ಗೆ ಕಾಳಜಇ ತೋರುವುದು ಬಿಟ್ಟು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋಗಳನ್ನು ಹರಿಬಿಟ್ಟು ಜನರಿಗೆ ಮಂಕುಬೂದಿ ಹಚ್ಚುತ್ತಿದ್ದಾರೆ. ಜನರು ಆದಷ್ಟು ಪ್ರಜ್ಞಾವಂತರಾಗಬೇಕು. ಈ ಸಂದರ್ಭದಲ್ಲಿ  ನಿಮ್ಮ ಬೆಂಬಲಕ್ಕೆ ಯಾರಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ಕೇವಲ ಮಾತಿನ ಮೋಡಿಗೆ ಮರುಳಾಗದೆ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು ಎಂದರು.

ಅಥಣಿ ತಾಲೂಕಿನಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಂದಾಗಿ ಜನಜೀವನ ತುಂಬಾ ಅಸ್ತವ್ಯಸ್ತವಾಗಿದೆ. ಇದನ್ನೆಲ್ಲಾ ಹತೋಟಿಗೆ ತರಲು ಪುರಸಭೆಯ ಅಧಿಕಾರಿಗಳು ಹಾಗೂ ಪೊಲೀಸ್ ಠಾಣೆಯ ಅಧಿಕಾರಿಗಳು ಹಗಲು-ರಾತ್ರಿಯೆನ್ನದೆ ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು