11:38 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಯುವ ಮುಖಂಡರಿಂದ ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತರಣೆ

03/06/2021, 19:17

ಅಥಣಿ(reporterkarnataka news): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಇಲ್ಲದಂತಾಗಿದ್ದು ಜನರ ಬಗ್ಗೆ ಕಾಳಜಿ ಮಾಡದೆ ತಮ್ಮ ವೈಯಕ್ತಿಕ ಕೆಲಸಗಳಿಗಾಗಿ ತೊಡಗುತ್ತಿರುವ ಸರ್ಕಾರವಾಗಿದೆ ಎಂದು ರಾಯಬಾಗ್ ಕಾಂಗ್ರೆಸ್ ಯುವ ಮುಖಂಡ ಯಲ್ಲಪ್ಪ ವೈ ಶಿಂಗಿ ಹೇಳಿದರು.ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಕುಡಚಿ ಮತಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಈ ಕೊರೊನಾ ದುಸ್ಥಿತಿಯಲ್ಲಿ ಜನರ ಬಗ್ಗೆ ಕಾಳಜಇ ತೋರುವುದು ಬಿಟ್ಟು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋಗಳನ್ನು ಹರಿಬಿಟ್ಟು ಜನರಿಗೆ ಮಂಕುಬೂದಿ ಹಚ್ಚುತ್ತಿದ್ದಾರೆ. ಜನರು ಆದಷ್ಟು ಪ್ರಜ್ಞಾವಂತರಾಗಬೇಕು. ಈ ಸಂದರ್ಭದಲ್ಲಿ  ನಿಮ್ಮ ಬೆಂಬಲಕ್ಕೆ ಯಾರಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ಕೇವಲ ಮಾತಿನ ಮೋಡಿಗೆ ಮರುಳಾಗದೆ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು ಎಂದರು.

ಅಥಣಿ ತಾಲೂಕಿನಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಂದಾಗಿ ಜನಜೀವನ ತುಂಬಾ ಅಸ್ತವ್ಯಸ್ತವಾಗಿದೆ. ಇದನ್ನೆಲ್ಲಾ ಹತೋಟಿಗೆ ತರಲು ಪುರಸಭೆಯ ಅಧಿಕಾರಿಗಳು ಹಾಗೂ ಪೊಲೀಸ್ ಠಾಣೆಯ ಅಧಿಕಾರಿಗಳು ಹಗಲು-ರಾತ್ರಿಯೆನ್ನದೆ ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು