12:14 PM Monday9 - June 2025
ಬ್ರೇಕಿಂಗ್ ನ್ಯೂಸ್
ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ಇತ್ತೀಚಿನ ಸುದ್ದಿ

ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ಮತ್ತೆ ಅಗೆಯುವುದು ಬಿಜೆಪಿ ಭ್ರಷ್ಟಾಚಾರದ ವಿರಾಟ್ ಸ್ವರೂಪ: ಸಿಪಿಎಂ ಗಂಭೀರ ಆರೋಪ

22/06/2024, 22:35

ಮಂಗಳೂರು(reporterkarnataka.com): ಮಂಗಳೂರು ನಗರದಾದ್ಯಂತ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಒಂದೆರಡು ತಿಂಗಳಲ್ಲಿ ಮತ್ತೆ ಅಗೆಯುವುದು ಬಿಜೆಪಿ ಆಡಳಿತದ ಭ್ರಷ್ಟಾಚಾರದ ವಿರಾಟ್ ಸ್ವರೂಪವಾಗಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಗಂಭೀರ ಆರೋಪ ಮಾಡಿದೆ.
ವಿವಿಧ ಯೋಜನೆಗಳ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿಯನ್ನು ಅಭಿವೃದ್ದಿಯ ಹೆಸರಿನಲ್ಲಿ ಕೇವಲ ರಸ್ತೆ ಕಾಮಗಾರಿಗಾಗಿಯೇ ವಿನಿಯೋಗಿಸಲಾಗುತ್ತದೆ.40 ಪರ್ಸೆಂಟ್ ಕಮಿಷನ್ ಹೆಸರಿನಲ್ಲಿ ಕೋಟ್ಯಂತರ ಹಣವನ್ನು ನುಂಗಿ ಹಾಕಲು ಏಕೈಕ ಸಾಧನ ರಸ್ತೆ ಅಭಿವೃದ್ಧಿಯಾಗಿದೆ .ರಸ್ತೆಗೆ ಕಾಂಕ್ರೀಟ್ ಮಾಡುವ ಸಂದರ್ಭದಲ್ಲಿ ರಸ್ತೆಯ ಅಡಿ ಭಾಗದಲ್ಲಿರುವ ಕೇಬಲ್, ನೀರಿನ ಪೈಪ್ ಲೈನ್, ಚರಂಡಿ ಸೇರಿದಂತೆ ಎಲ್ಲವುಗಳನ್ನು ರಸ್ತೆಯ ಬದಿಗೆ ಸರಿಸಿದ ಬಳಿಕವೇ ಕಾಂಕ್ರೀಟ್ ಮಾಡಬೇಕೆಂಬ ನಿಯಮವಿದ್ದರೂ, ಅವೆಲ್ಲವುಗಳನ್ನು ಗಾಳಿಗೆ ತೂರಿ, ಕಾಮಗಾರಿಗಾಗಿ ಮೀಸಲಿಟ್ಟ ಕೋಟ್ಯಂತರ ಹಣ ನಿಗದಿತ ಅವಧಿಯಲ್ಲಿ ಕಾಮಗಾರಿ ನಡೆಯದಿದ್ದರೆ ವಾಪಸ್ ಹೋಗುವ ಭೀತಿಯಿಂದ ತರಾತುರಿಯಲ್ಲಿ ಇದ್ದ ರಸ್ತೆಗೆ ಕಾಂಕ್ರೀಟ್ ಮಾಡಲಾಗುತ್ತದೆ. ಬಳಿಕ ನೀರಿನ ಪೈಪ್ ಸೋರಿಕೆ ಕಂಡಾಗ, ಕೇಬಲ್ ಹಾಕುವಾಗ ಹಾಗೂ ಒಳಚರಂಡಿ ದುರಸ್ತಿಯ ಹೆಸರಿನಲ್ಲಿ ಅಗಿಂದ್ದಾಗೆ ಅಗೆಯಲಾಗುತ್ತದೆ. ಒಟ್ಟಿನಲ್ಲಿ ರಸ್ತೆಯ ಕಾಂಕ್ರೀಟೀಕರಣಗಿಂತಲೂ ಅಗೆಯುವ ಹೆಸರಿನಲ್ಲಿ ದುಪ್ಪಟ್ಟು ಹಣವನ್ನು ನುಂಗಿ ಹಾಕಲಾಗುತ್ತದೆ. ಇದರಿಂದ ಬಿಜೆಪಿ ಆಡಳಿತದ ಬ್ರಹ್ಮಾಂಡ ಭ್ರಷ್ಟಾಚಾರದ ವಿರಾಟ್ ಸ್ವರೂಪ ಬಹಿರಂಗಗೊಂಡಿದೆ ಎಂದು ಸಿಪಿಎಂ ಅಕ್ರೋಶ ವ್ಯಕ್ತಪಡಿಸಿದೆ.


ಬೋಳಾರ ಮುಳಿಹಿತ್ಲು ಪ್ರದೇಶದ ಅತ್ಯಂತ ಪ್ರಮುಖ ರಸ್ತೆಯ ಕಾಂಕ್ರೀಟೀಕರಣ ಕಳೆದ ತಿಂಗಳಷ್ಟೇ ಮುಗಿದಿದ್ದು ಈಗ ಮತ್ತೆ ಕ್ಷುಲ್ಲಕ ಕಾರಣಗಳನ್ನೊಡ್ಡಿ ಮತ್ತೆ ಅಗೆಯಲಾಗಿದೆ. ಇಂತಹ ಅವೈಜ್ಞಾನಿಕ ಕ್ರಮಗಳಿಂದ ಜನತೆಯ ತೆರಿಗೆಯ ಹಣ ವಿಪರೀತವಾಗಿ ಪೋಲಾಗುತ್ತಿದ್ದು ಈ ಬಗ್ಗೆ ಮಂಗಳೂರಿನ ಜನತೆ ತೀರಾ ಎಚ್ಚರದಿಂದಿರಬೇಕೆಂದು ಸಿಪಿಎಂ ದ.ಕ‌.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು