8:33 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ಮತ್ತೆ ಅಗೆಯುವುದು ಬಿಜೆಪಿ ಭ್ರಷ್ಟಾಚಾರದ ವಿರಾಟ್ ಸ್ವರೂಪ: ಸಿಪಿಎಂ ಗಂಭೀರ ಆರೋಪ

22/06/2024, 22:35

ಮಂಗಳೂರು(reporterkarnataka.com): ಮಂಗಳೂರು ನಗರದಾದ್ಯಂತ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಒಂದೆರಡು ತಿಂಗಳಲ್ಲಿ ಮತ್ತೆ ಅಗೆಯುವುದು ಬಿಜೆಪಿ ಆಡಳಿತದ ಭ್ರಷ್ಟಾಚಾರದ ವಿರಾಟ್ ಸ್ವರೂಪವಾಗಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಗಂಭೀರ ಆರೋಪ ಮಾಡಿದೆ.
ವಿವಿಧ ಯೋಜನೆಗಳ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿಯನ್ನು ಅಭಿವೃದ್ದಿಯ ಹೆಸರಿನಲ್ಲಿ ಕೇವಲ ರಸ್ತೆ ಕಾಮಗಾರಿಗಾಗಿಯೇ ವಿನಿಯೋಗಿಸಲಾಗುತ್ತದೆ.40 ಪರ್ಸೆಂಟ್ ಕಮಿಷನ್ ಹೆಸರಿನಲ್ಲಿ ಕೋಟ್ಯಂತರ ಹಣವನ್ನು ನುಂಗಿ ಹಾಕಲು ಏಕೈಕ ಸಾಧನ ರಸ್ತೆ ಅಭಿವೃದ್ಧಿಯಾಗಿದೆ .ರಸ್ತೆಗೆ ಕಾಂಕ್ರೀಟ್ ಮಾಡುವ ಸಂದರ್ಭದಲ್ಲಿ ರಸ್ತೆಯ ಅಡಿ ಭಾಗದಲ್ಲಿರುವ ಕೇಬಲ್, ನೀರಿನ ಪೈಪ್ ಲೈನ್, ಚರಂಡಿ ಸೇರಿದಂತೆ ಎಲ್ಲವುಗಳನ್ನು ರಸ್ತೆಯ ಬದಿಗೆ ಸರಿಸಿದ ಬಳಿಕವೇ ಕಾಂಕ್ರೀಟ್ ಮಾಡಬೇಕೆಂಬ ನಿಯಮವಿದ್ದರೂ, ಅವೆಲ್ಲವುಗಳನ್ನು ಗಾಳಿಗೆ ತೂರಿ, ಕಾಮಗಾರಿಗಾಗಿ ಮೀಸಲಿಟ್ಟ ಕೋಟ್ಯಂತರ ಹಣ ನಿಗದಿತ ಅವಧಿಯಲ್ಲಿ ಕಾಮಗಾರಿ ನಡೆಯದಿದ್ದರೆ ವಾಪಸ್ ಹೋಗುವ ಭೀತಿಯಿಂದ ತರಾತುರಿಯಲ್ಲಿ ಇದ್ದ ರಸ್ತೆಗೆ ಕಾಂಕ್ರೀಟ್ ಮಾಡಲಾಗುತ್ತದೆ. ಬಳಿಕ ನೀರಿನ ಪೈಪ್ ಸೋರಿಕೆ ಕಂಡಾಗ, ಕೇಬಲ್ ಹಾಕುವಾಗ ಹಾಗೂ ಒಳಚರಂಡಿ ದುರಸ್ತಿಯ ಹೆಸರಿನಲ್ಲಿ ಅಗಿಂದ್ದಾಗೆ ಅಗೆಯಲಾಗುತ್ತದೆ. ಒಟ್ಟಿನಲ್ಲಿ ರಸ್ತೆಯ ಕಾಂಕ್ರೀಟೀಕರಣಗಿಂತಲೂ ಅಗೆಯುವ ಹೆಸರಿನಲ್ಲಿ ದುಪ್ಪಟ್ಟು ಹಣವನ್ನು ನುಂಗಿ ಹಾಕಲಾಗುತ್ತದೆ. ಇದರಿಂದ ಬಿಜೆಪಿ ಆಡಳಿತದ ಬ್ರಹ್ಮಾಂಡ ಭ್ರಷ್ಟಾಚಾರದ ವಿರಾಟ್ ಸ್ವರೂಪ ಬಹಿರಂಗಗೊಂಡಿದೆ ಎಂದು ಸಿಪಿಎಂ ಅಕ್ರೋಶ ವ್ಯಕ್ತಪಡಿಸಿದೆ.


ಬೋಳಾರ ಮುಳಿಹಿತ್ಲು ಪ್ರದೇಶದ ಅತ್ಯಂತ ಪ್ರಮುಖ ರಸ್ತೆಯ ಕಾಂಕ್ರೀಟೀಕರಣ ಕಳೆದ ತಿಂಗಳಷ್ಟೇ ಮುಗಿದಿದ್ದು ಈಗ ಮತ್ತೆ ಕ್ಷುಲ್ಲಕ ಕಾರಣಗಳನ್ನೊಡ್ಡಿ ಮತ್ತೆ ಅಗೆಯಲಾಗಿದೆ. ಇಂತಹ ಅವೈಜ್ಞಾನಿಕ ಕ್ರಮಗಳಿಂದ ಜನತೆಯ ತೆರಿಗೆಯ ಹಣ ವಿಪರೀತವಾಗಿ ಪೋಲಾಗುತ್ತಿದ್ದು ಈ ಬಗ್ಗೆ ಮಂಗಳೂರಿನ ಜನತೆ ತೀರಾ ಎಚ್ಚರದಿಂದಿರಬೇಕೆಂದು ಸಿಪಿಎಂ ದ.ಕ‌.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು