6:49 AM Sunday29 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ಮತ್ತೆ ಅಗೆಯುವುದು ಬಿಜೆಪಿ ಭ್ರಷ್ಟಾಚಾರದ ವಿರಾಟ್ ಸ್ವರೂಪ: ಸಿಪಿಎಂ ಗಂಭೀರ ಆರೋಪ

22/06/2024, 22:35

ಮಂಗಳೂರು(reporterkarnataka.com): ಮಂಗಳೂರು ನಗರದಾದ್ಯಂತ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಒಂದೆರಡು ತಿಂಗಳಲ್ಲಿ ಮತ್ತೆ ಅಗೆಯುವುದು ಬಿಜೆಪಿ ಆಡಳಿತದ ಭ್ರಷ್ಟಾಚಾರದ ವಿರಾಟ್ ಸ್ವರೂಪವಾಗಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಗಂಭೀರ ಆರೋಪ ಮಾಡಿದೆ.
ವಿವಿಧ ಯೋಜನೆಗಳ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿಯನ್ನು ಅಭಿವೃದ್ದಿಯ ಹೆಸರಿನಲ್ಲಿ ಕೇವಲ ರಸ್ತೆ ಕಾಮಗಾರಿಗಾಗಿಯೇ ವಿನಿಯೋಗಿಸಲಾಗುತ್ತದೆ.40 ಪರ್ಸೆಂಟ್ ಕಮಿಷನ್ ಹೆಸರಿನಲ್ಲಿ ಕೋಟ್ಯಂತರ ಹಣವನ್ನು ನುಂಗಿ ಹಾಕಲು ಏಕೈಕ ಸಾಧನ ರಸ್ತೆ ಅಭಿವೃದ್ಧಿಯಾಗಿದೆ .ರಸ್ತೆಗೆ ಕಾಂಕ್ರೀಟ್ ಮಾಡುವ ಸಂದರ್ಭದಲ್ಲಿ ರಸ್ತೆಯ ಅಡಿ ಭಾಗದಲ್ಲಿರುವ ಕೇಬಲ್, ನೀರಿನ ಪೈಪ್ ಲೈನ್, ಚರಂಡಿ ಸೇರಿದಂತೆ ಎಲ್ಲವುಗಳನ್ನು ರಸ್ತೆಯ ಬದಿಗೆ ಸರಿಸಿದ ಬಳಿಕವೇ ಕಾಂಕ್ರೀಟ್ ಮಾಡಬೇಕೆಂಬ ನಿಯಮವಿದ್ದರೂ, ಅವೆಲ್ಲವುಗಳನ್ನು ಗಾಳಿಗೆ ತೂರಿ, ಕಾಮಗಾರಿಗಾಗಿ ಮೀಸಲಿಟ್ಟ ಕೋಟ್ಯಂತರ ಹಣ ನಿಗದಿತ ಅವಧಿಯಲ್ಲಿ ಕಾಮಗಾರಿ ನಡೆಯದಿದ್ದರೆ ವಾಪಸ್ ಹೋಗುವ ಭೀತಿಯಿಂದ ತರಾತುರಿಯಲ್ಲಿ ಇದ್ದ ರಸ್ತೆಗೆ ಕಾಂಕ್ರೀಟ್ ಮಾಡಲಾಗುತ್ತದೆ. ಬಳಿಕ ನೀರಿನ ಪೈಪ್ ಸೋರಿಕೆ ಕಂಡಾಗ, ಕೇಬಲ್ ಹಾಕುವಾಗ ಹಾಗೂ ಒಳಚರಂಡಿ ದುರಸ್ತಿಯ ಹೆಸರಿನಲ್ಲಿ ಅಗಿಂದ್ದಾಗೆ ಅಗೆಯಲಾಗುತ್ತದೆ. ಒಟ್ಟಿನಲ್ಲಿ ರಸ್ತೆಯ ಕಾಂಕ್ರೀಟೀಕರಣಗಿಂತಲೂ ಅಗೆಯುವ ಹೆಸರಿನಲ್ಲಿ ದುಪ್ಪಟ್ಟು ಹಣವನ್ನು ನುಂಗಿ ಹಾಕಲಾಗುತ್ತದೆ. ಇದರಿಂದ ಬಿಜೆಪಿ ಆಡಳಿತದ ಬ್ರಹ್ಮಾಂಡ ಭ್ರಷ್ಟಾಚಾರದ ವಿರಾಟ್ ಸ್ವರೂಪ ಬಹಿರಂಗಗೊಂಡಿದೆ ಎಂದು ಸಿಪಿಎಂ ಅಕ್ರೋಶ ವ್ಯಕ್ತಪಡಿಸಿದೆ.


ಬೋಳಾರ ಮುಳಿಹಿತ್ಲು ಪ್ರದೇಶದ ಅತ್ಯಂತ ಪ್ರಮುಖ ರಸ್ತೆಯ ಕಾಂಕ್ರೀಟೀಕರಣ ಕಳೆದ ತಿಂಗಳಷ್ಟೇ ಮುಗಿದಿದ್ದು ಈಗ ಮತ್ತೆ ಕ್ಷುಲ್ಲಕ ಕಾರಣಗಳನ್ನೊಡ್ಡಿ ಮತ್ತೆ ಅಗೆಯಲಾಗಿದೆ. ಇಂತಹ ಅವೈಜ್ಞಾನಿಕ ಕ್ರಮಗಳಿಂದ ಜನತೆಯ ತೆರಿಗೆಯ ಹಣ ವಿಪರೀತವಾಗಿ ಪೋಲಾಗುತ್ತಿದ್ದು ಈ ಬಗ್ಗೆ ಮಂಗಳೂರಿನ ಜನತೆ ತೀರಾ ಎಚ್ಚರದಿಂದಿರಬೇಕೆಂದು ಸಿಪಿಎಂ ದ.ಕ‌.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು