3:53 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ಮತ್ತೆ ಅಗೆಯುವುದು ಬಿಜೆಪಿ ಭ್ರಷ್ಟಾಚಾರದ ವಿರಾಟ್ ಸ್ವರೂಪ: ಸಿಪಿಎಂ ಗಂಭೀರ ಆರೋಪ

22/06/2024, 22:35

ಮಂಗಳೂರು(reporterkarnataka.com): ಮಂಗಳೂರು ನಗರದಾದ್ಯಂತ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಒಂದೆರಡು ತಿಂಗಳಲ್ಲಿ ಮತ್ತೆ ಅಗೆಯುವುದು ಬಿಜೆಪಿ ಆಡಳಿತದ ಭ್ರಷ್ಟಾಚಾರದ ವಿರಾಟ್ ಸ್ವರೂಪವಾಗಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಗಂಭೀರ ಆರೋಪ ಮಾಡಿದೆ.
ವಿವಿಧ ಯೋಜನೆಗಳ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿಯನ್ನು ಅಭಿವೃದ್ದಿಯ ಹೆಸರಿನಲ್ಲಿ ಕೇವಲ ರಸ್ತೆ ಕಾಮಗಾರಿಗಾಗಿಯೇ ವಿನಿಯೋಗಿಸಲಾಗುತ್ತದೆ.40 ಪರ್ಸೆಂಟ್ ಕಮಿಷನ್ ಹೆಸರಿನಲ್ಲಿ ಕೋಟ್ಯಂತರ ಹಣವನ್ನು ನುಂಗಿ ಹಾಕಲು ಏಕೈಕ ಸಾಧನ ರಸ್ತೆ ಅಭಿವೃದ್ಧಿಯಾಗಿದೆ .ರಸ್ತೆಗೆ ಕಾಂಕ್ರೀಟ್ ಮಾಡುವ ಸಂದರ್ಭದಲ್ಲಿ ರಸ್ತೆಯ ಅಡಿ ಭಾಗದಲ್ಲಿರುವ ಕೇಬಲ್, ನೀರಿನ ಪೈಪ್ ಲೈನ್, ಚರಂಡಿ ಸೇರಿದಂತೆ ಎಲ್ಲವುಗಳನ್ನು ರಸ್ತೆಯ ಬದಿಗೆ ಸರಿಸಿದ ಬಳಿಕವೇ ಕಾಂಕ್ರೀಟ್ ಮಾಡಬೇಕೆಂಬ ನಿಯಮವಿದ್ದರೂ, ಅವೆಲ್ಲವುಗಳನ್ನು ಗಾಳಿಗೆ ತೂರಿ, ಕಾಮಗಾರಿಗಾಗಿ ಮೀಸಲಿಟ್ಟ ಕೋಟ್ಯಂತರ ಹಣ ನಿಗದಿತ ಅವಧಿಯಲ್ಲಿ ಕಾಮಗಾರಿ ನಡೆಯದಿದ್ದರೆ ವಾಪಸ್ ಹೋಗುವ ಭೀತಿಯಿಂದ ತರಾತುರಿಯಲ್ಲಿ ಇದ್ದ ರಸ್ತೆಗೆ ಕಾಂಕ್ರೀಟ್ ಮಾಡಲಾಗುತ್ತದೆ. ಬಳಿಕ ನೀರಿನ ಪೈಪ್ ಸೋರಿಕೆ ಕಂಡಾಗ, ಕೇಬಲ್ ಹಾಕುವಾಗ ಹಾಗೂ ಒಳಚರಂಡಿ ದುರಸ್ತಿಯ ಹೆಸರಿನಲ್ಲಿ ಅಗಿಂದ್ದಾಗೆ ಅಗೆಯಲಾಗುತ್ತದೆ. ಒಟ್ಟಿನಲ್ಲಿ ರಸ್ತೆಯ ಕಾಂಕ್ರೀಟೀಕರಣಗಿಂತಲೂ ಅಗೆಯುವ ಹೆಸರಿನಲ್ಲಿ ದುಪ್ಪಟ್ಟು ಹಣವನ್ನು ನುಂಗಿ ಹಾಕಲಾಗುತ್ತದೆ. ಇದರಿಂದ ಬಿಜೆಪಿ ಆಡಳಿತದ ಬ್ರಹ್ಮಾಂಡ ಭ್ರಷ್ಟಾಚಾರದ ವಿರಾಟ್ ಸ್ವರೂಪ ಬಹಿರಂಗಗೊಂಡಿದೆ ಎಂದು ಸಿಪಿಎಂ ಅಕ್ರೋಶ ವ್ಯಕ್ತಪಡಿಸಿದೆ.


ಬೋಳಾರ ಮುಳಿಹಿತ್ಲು ಪ್ರದೇಶದ ಅತ್ಯಂತ ಪ್ರಮುಖ ರಸ್ತೆಯ ಕಾಂಕ್ರೀಟೀಕರಣ ಕಳೆದ ತಿಂಗಳಷ್ಟೇ ಮುಗಿದಿದ್ದು ಈಗ ಮತ್ತೆ ಕ್ಷುಲ್ಲಕ ಕಾರಣಗಳನ್ನೊಡ್ಡಿ ಮತ್ತೆ ಅಗೆಯಲಾಗಿದೆ. ಇಂತಹ ಅವೈಜ್ಞಾನಿಕ ಕ್ರಮಗಳಿಂದ ಜನತೆಯ ತೆರಿಗೆಯ ಹಣ ವಿಪರೀತವಾಗಿ ಪೋಲಾಗುತ್ತಿದ್ದು ಈ ಬಗ್ಗೆ ಮಂಗಳೂರಿನ ಜನತೆ ತೀರಾ ಎಚ್ಚರದಿಂದಿರಬೇಕೆಂದು ಸಿಪಿಎಂ ದ.ಕ‌.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು