12:39 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ

25/03/2025, 14:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterarnataka@gmail.com

ಮುಸಲ್ಮಾನರಿಗೋಸ್ಕರ ಈ ದೇಶದಲ್ಲಿ ಸಂವಿಧಾನವನ್ನೇ ನಾವು ಬದಲಾಯಿಸಬಹುದು ಎಂಬ ಮಾತನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ಈ ರಾಷ್ಟ್ರದಲ್ಲಿ ನೂರಾರು ಸಾರಿ ಸಂವಿಧಾನ ಅಮೆಂಟ್ ಮೆಂಟ್ ಆಗಿದೆ. 75-76 ಬಾರಿ ಕಾಂಗ್ರೆಸ್ ಸರ್ಕಾರವೆ ಮಾಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳವಾರ ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ದೇಶದ ದೃಷ್ಟಿಯಿಂದ ಸಂವಿಧಾನವನ್ನು ತಿದ್ದುಪಡಿ ಮಾಡಲಿಲ್ಲ.ತಮ್ಮ ಸ್ವಾರ್ಥದ ದೃಷ್ಟಿಯಿಂದ, ಮುಸಲ್ಮಾನರ ದೃಷ್ಟಿಯಿಂದ, ತಮ್ಮ ಓಟ್ ಬ್ಯಾಂಕ್ ದೃಷ್ಟಿಯಿಂದ, ಅಂಬೇಡ್ಕರ್ ಅವರು ಬರೆದಿದ್ದ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಸಂವಿಧಾನವನ್ನು ಅಮೆಂಟ್ ಮೆಂಟ್ ಮಾಡಿದ್ದಾರೆ. ಉಳಿದಂತೆ ವಾಜಪೇಯಿ ಅಥವಾ ಮೋದಿ ಸರ್ಕಾರ ಅಮೆಂಟ್ ಮೆಂಟ್ ಮಾಡಿದ್ದರೆ ರಾಷ್ಟ್ರದ ದೃಷ್ಟಿಯಿಂದ ಮಾಡಿದ್ದೇವೆ. ಆದರೆ ಈಗ ಮುಸಲ್ಮಾನರಿಗಾಗಿ ಸಂವಿಧಾನ ಬದಲಾವಣೆ ಮಾಡಬಹುದು ಎಂದು, ಈ ರೀತಿಯ ಹೇಸಿಗೆ ಮಾತನ್ನು ಆಡುತ್ತಾರೆ ಎಂದರು.
1947ರಲ್ಲಿ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆದಿರುವ ಕಾಂಗ್ರೆಸ್ ಇವತ್ತು ಪಾಠ ಕಲಿಯದೇ ಪುನಃ ಊರು ಊರಿನ ಮುಸಲ್ಮಾನರನ್ನು ಎತ್ತಿ ಕಟ್ಟಿ ದೇಶ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ, ಕಾಂಗ್ರೆಸ್ ನ ದ್ರೋಹಿತನದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಹಿಂದೂ ಎಂದರೆ ಕಾಂಗ್ರೆಸ್ ಗೆ ಎರಡನೇ ದರ್ಜೆಯ ಪ್ರಜೆಗಳು, ಹಾಗಾಗಿ ಇದನ್ನೆಲ್ಲಾ ನೆನಪಿನಲ್ಲಿ ಇಟ್ಟುಕೊಂಡು ಹಿಂದೂಗಳು ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಎಲ್ಲಿ ಇಡಬೇಕು ಎಂದು ನೋಡಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು