12:29 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ

25/03/2025, 14:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterarnataka@gmail.com

ಮುಸಲ್ಮಾನರಿಗೋಸ್ಕರ ಈ ದೇಶದಲ್ಲಿ ಸಂವಿಧಾನವನ್ನೇ ನಾವು ಬದಲಾಯಿಸಬಹುದು ಎಂಬ ಮಾತನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ಈ ರಾಷ್ಟ್ರದಲ್ಲಿ ನೂರಾರು ಸಾರಿ ಸಂವಿಧಾನ ಅಮೆಂಟ್ ಮೆಂಟ್ ಆಗಿದೆ. 75-76 ಬಾರಿ ಕಾಂಗ್ರೆಸ್ ಸರ್ಕಾರವೆ ಮಾಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳವಾರ ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ದೇಶದ ದೃಷ್ಟಿಯಿಂದ ಸಂವಿಧಾನವನ್ನು ತಿದ್ದುಪಡಿ ಮಾಡಲಿಲ್ಲ.ತಮ್ಮ ಸ್ವಾರ್ಥದ ದೃಷ್ಟಿಯಿಂದ, ಮುಸಲ್ಮಾನರ ದೃಷ್ಟಿಯಿಂದ, ತಮ್ಮ ಓಟ್ ಬ್ಯಾಂಕ್ ದೃಷ್ಟಿಯಿಂದ, ಅಂಬೇಡ್ಕರ್ ಅವರು ಬರೆದಿದ್ದ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಸಂವಿಧಾನವನ್ನು ಅಮೆಂಟ್ ಮೆಂಟ್ ಮಾಡಿದ್ದಾರೆ. ಉಳಿದಂತೆ ವಾಜಪೇಯಿ ಅಥವಾ ಮೋದಿ ಸರ್ಕಾರ ಅಮೆಂಟ್ ಮೆಂಟ್ ಮಾಡಿದ್ದರೆ ರಾಷ್ಟ್ರದ ದೃಷ್ಟಿಯಿಂದ ಮಾಡಿದ್ದೇವೆ. ಆದರೆ ಈಗ ಮುಸಲ್ಮಾನರಿಗಾಗಿ ಸಂವಿಧಾನ ಬದಲಾವಣೆ ಮಾಡಬಹುದು ಎಂದು, ಈ ರೀತಿಯ ಹೇಸಿಗೆ ಮಾತನ್ನು ಆಡುತ್ತಾರೆ ಎಂದರು.
1947ರಲ್ಲಿ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆದಿರುವ ಕಾಂಗ್ರೆಸ್ ಇವತ್ತು ಪಾಠ ಕಲಿಯದೇ ಪುನಃ ಊರು ಊರಿನ ಮುಸಲ್ಮಾನರನ್ನು ಎತ್ತಿ ಕಟ್ಟಿ ದೇಶ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ, ಕಾಂಗ್ರೆಸ್ ನ ದ್ರೋಹಿತನದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಹಿಂದೂ ಎಂದರೆ ಕಾಂಗ್ರೆಸ್ ಗೆ ಎರಡನೇ ದರ್ಜೆಯ ಪ್ರಜೆಗಳು, ಹಾಗಾಗಿ ಇದನ್ನೆಲ್ಲಾ ನೆನಪಿನಲ್ಲಿ ಇಟ್ಟುಕೊಂಡು ಹಿಂದೂಗಳು ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಎಲ್ಲಿ ಇಡಬೇಕು ಎಂದು ನೋಡಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು