8:49 AM Tuesday17 - June 2025
ಬ್ರೇಕಿಂಗ್ ನ್ಯೂಸ್
Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ…

ಇತ್ತೀಚಿನ ಸುದ್ದಿ

Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ

25/03/2025, 14:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterarnataka@gmail.com

ಮುಸಲ್ಮಾನರಿಗೋಸ್ಕರ ಈ ದೇಶದಲ್ಲಿ ಸಂವಿಧಾನವನ್ನೇ ನಾವು ಬದಲಾಯಿಸಬಹುದು ಎಂಬ ಮಾತನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ಈ ರಾಷ್ಟ್ರದಲ್ಲಿ ನೂರಾರು ಸಾರಿ ಸಂವಿಧಾನ ಅಮೆಂಟ್ ಮೆಂಟ್ ಆಗಿದೆ. 75-76 ಬಾರಿ ಕಾಂಗ್ರೆಸ್ ಸರ್ಕಾರವೆ ಮಾಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳವಾರ ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ದೇಶದ ದೃಷ್ಟಿಯಿಂದ ಸಂವಿಧಾನವನ್ನು ತಿದ್ದುಪಡಿ ಮಾಡಲಿಲ್ಲ.ತಮ್ಮ ಸ್ವಾರ್ಥದ ದೃಷ್ಟಿಯಿಂದ, ಮುಸಲ್ಮಾನರ ದೃಷ್ಟಿಯಿಂದ, ತಮ್ಮ ಓಟ್ ಬ್ಯಾಂಕ್ ದೃಷ್ಟಿಯಿಂದ, ಅಂಬೇಡ್ಕರ್ ಅವರು ಬರೆದಿದ್ದ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಸಂವಿಧಾನವನ್ನು ಅಮೆಂಟ್ ಮೆಂಟ್ ಮಾಡಿದ್ದಾರೆ. ಉಳಿದಂತೆ ವಾಜಪೇಯಿ ಅಥವಾ ಮೋದಿ ಸರ್ಕಾರ ಅಮೆಂಟ್ ಮೆಂಟ್ ಮಾಡಿದ್ದರೆ ರಾಷ್ಟ್ರದ ದೃಷ್ಟಿಯಿಂದ ಮಾಡಿದ್ದೇವೆ. ಆದರೆ ಈಗ ಮುಸಲ್ಮಾನರಿಗಾಗಿ ಸಂವಿಧಾನ ಬದಲಾವಣೆ ಮಾಡಬಹುದು ಎಂದು, ಈ ರೀತಿಯ ಹೇಸಿಗೆ ಮಾತನ್ನು ಆಡುತ್ತಾರೆ ಎಂದರು.
1947ರಲ್ಲಿ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆದಿರುವ ಕಾಂಗ್ರೆಸ್ ಇವತ್ತು ಪಾಠ ಕಲಿಯದೇ ಪುನಃ ಊರು ಊರಿನ ಮುಸಲ್ಮಾನರನ್ನು ಎತ್ತಿ ಕಟ್ಟಿ ದೇಶ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ, ಕಾಂಗ್ರೆಸ್ ನ ದ್ರೋಹಿತನದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಹಿಂದೂ ಎಂದರೆ ಕಾಂಗ್ರೆಸ್ ಗೆ ಎರಡನೇ ದರ್ಜೆಯ ಪ್ರಜೆಗಳು, ಹಾಗಾಗಿ ಇದನ್ನೆಲ್ಲಾ ನೆನಪಿನಲ್ಲಿ ಇಟ್ಟುಕೊಂಡು ಹಿಂದೂಗಳು ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಎಲ್ಲಿ ಇಡಬೇಕು ಎಂದು ನೋಡಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು