3:23 PM Tuesday25 - March 2025
ಬ್ರೇಕಿಂಗ್ ನ್ಯೂಸ್
Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ… Delhi | ಸಂವಿಧಾನ ವಿರೋಧಿ ರಾಜ್ಯ ಸರಕಾರ ರಾಜೀನಾಮೆ ನೀಡಲಿ: ಮಾಜಿ ಸಿಎಂ… Honey Trap | ಬಿಜೆಪಿ ಬಳಿ ಸಿಡಿ‌ ಫ್ಯಾಕ್ಟರಿಯೇ ಇದೆ; ಅವರ ಕಾಲದಲ್ಲಿ… Speaker | ಅಶಿಸ್ತು, ಅಗೌರವ ತೋರಿಸಿದರೆ ಮುಂದಿನ ಅಧಿವೇಶನದಲ್ಲೂ ಸಸ್ಪೆಂಡ್ ಮಾಡುವೆ: ಸ್ಪೀಕರ್… ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್… FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:… Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು… Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ… 23.24 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್

ಇತ್ತೀಚಿನ ಸುದ್ದಿ

Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ

25/03/2025, 14:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterarnataka@gmail.com

ಮುಸಲ್ಮಾನರಿಗೋಸ್ಕರ ಈ ದೇಶದಲ್ಲಿ ಸಂವಿಧಾನವನ್ನೇ ನಾವು ಬದಲಾಯಿಸಬಹುದು ಎಂಬ ಮಾತನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ಈ ರಾಷ್ಟ್ರದಲ್ಲಿ ನೂರಾರು ಸಾರಿ ಸಂವಿಧಾನ ಅಮೆಂಟ್ ಮೆಂಟ್ ಆಗಿದೆ. 75-76 ಬಾರಿ ಕಾಂಗ್ರೆಸ್ ಸರ್ಕಾರವೆ ಮಾಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳವಾರ ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ದೇಶದ ದೃಷ್ಟಿಯಿಂದ ಸಂವಿಧಾನವನ್ನು ತಿದ್ದುಪಡಿ ಮಾಡಲಿಲ್ಲ.ತಮ್ಮ ಸ್ವಾರ್ಥದ ದೃಷ್ಟಿಯಿಂದ, ಮುಸಲ್ಮಾನರ ದೃಷ್ಟಿಯಿಂದ, ತಮ್ಮ ಓಟ್ ಬ್ಯಾಂಕ್ ದೃಷ್ಟಿಯಿಂದ, ಅಂಬೇಡ್ಕರ್ ಅವರು ಬರೆದಿದ್ದ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಸಂವಿಧಾನವನ್ನು ಅಮೆಂಟ್ ಮೆಂಟ್ ಮಾಡಿದ್ದಾರೆ. ಉಳಿದಂತೆ ವಾಜಪೇಯಿ ಅಥವಾ ಮೋದಿ ಸರ್ಕಾರ ಅಮೆಂಟ್ ಮೆಂಟ್ ಮಾಡಿದ್ದರೆ ರಾಷ್ಟ್ರದ ದೃಷ್ಟಿಯಿಂದ ಮಾಡಿದ್ದೇವೆ. ಆದರೆ ಈಗ ಮುಸಲ್ಮಾನರಿಗಾಗಿ ಸಂವಿಧಾನ ಬದಲಾವಣೆ ಮಾಡಬಹುದು ಎಂದು, ಈ ರೀತಿಯ ಹೇಸಿಗೆ ಮಾತನ್ನು ಆಡುತ್ತಾರೆ ಎಂದರು.
1947ರಲ್ಲಿ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆದಿರುವ ಕಾಂಗ್ರೆಸ್ ಇವತ್ತು ಪಾಠ ಕಲಿಯದೇ ಪುನಃ ಊರು ಊರಿನ ಮುಸಲ್ಮಾನರನ್ನು ಎತ್ತಿ ಕಟ್ಟಿ ದೇಶ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ, ಕಾಂಗ್ರೆಸ್ ನ ದ್ರೋಹಿತನದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಹಿಂದೂ ಎಂದರೆ ಕಾಂಗ್ರೆಸ್ ಗೆ ಎರಡನೇ ದರ್ಜೆಯ ಪ್ರಜೆಗಳು, ಹಾಗಾಗಿ ಇದನ್ನೆಲ್ಲಾ ನೆನಪಿನಲ್ಲಿ ಇಟ್ಟುಕೊಂಡು ಹಿಂದೂಗಳು ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಎಲ್ಲಿ ಇಡಬೇಕು ಎಂದು ನೋಡಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು