12:07 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ

25/03/2025, 14:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterarnataka@gmail.com

ಮುಸಲ್ಮಾನರಿಗೋಸ್ಕರ ಈ ದೇಶದಲ್ಲಿ ಸಂವಿಧಾನವನ್ನೇ ನಾವು ಬದಲಾಯಿಸಬಹುದು ಎಂಬ ಮಾತನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ಈ ರಾಷ್ಟ್ರದಲ್ಲಿ ನೂರಾರು ಸಾರಿ ಸಂವಿಧಾನ ಅಮೆಂಟ್ ಮೆಂಟ್ ಆಗಿದೆ. 75-76 ಬಾರಿ ಕಾಂಗ್ರೆಸ್ ಸರ್ಕಾರವೆ ಮಾಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳವಾರ ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ದೇಶದ ದೃಷ್ಟಿಯಿಂದ ಸಂವಿಧಾನವನ್ನು ತಿದ್ದುಪಡಿ ಮಾಡಲಿಲ್ಲ.ತಮ್ಮ ಸ್ವಾರ್ಥದ ದೃಷ್ಟಿಯಿಂದ, ಮುಸಲ್ಮಾನರ ದೃಷ್ಟಿಯಿಂದ, ತಮ್ಮ ಓಟ್ ಬ್ಯಾಂಕ್ ದೃಷ್ಟಿಯಿಂದ, ಅಂಬೇಡ್ಕರ್ ಅವರು ಬರೆದಿದ್ದ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಸಂವಿಧಾನವನ್ನು ಅಮೆಂಟ್ ಮೆಂಟ್ ಮಾಡಿದ್ದಾರೆ. ಉಳಿದಂತೆ ವಾಜಪೇಯಿ ಅಥವಾ ಮೋದಿ ಸರ್ಕಾರ ಅಮೆಂಟ್ ಮೆಂಟ್ ಮಾಡಿದ್ದರೆ ರಾಷ್ಟ್ರದ ದೃಷ್ಟಿಯಿಂದ ಮಾಡಿದ್ದೇವೆ. ಆದರೆ ಈಗ ಮುಸಲ್ಮಾನರಿಗಾಗಿ ಸಂವಿಧಾನ ಬದಲಾವಣೆ ಮಾಡಬಹುದು ಎಂದು, ಈ ರೀತಿಯ ಹೇಸಿಗೆ ಮಾತನ್ನು ಆಡುತ್ತಾರೆ ಎಂದರು.
1947ರಲ್ಲಿ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆದಿರುವ ಕಾಂಗ್ರೆಸ್ ಇವತ್ತು ಪಾಠ ಕಲಿಯದೇ ಪುನಃ ಊರು ಊರಿನ ಮುಸಲ್ಮಾನರನ್ನು ಎತ್ತಿ ಕಟ್ಟಿ ದೇಶ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ, ಕಾಂಗ್ರೆಸ್ ನ ದ್ರೋಹಿತನದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಹಿಂದೂ ಎಂದರೆ ಕಾಂಗ್ರೆಸ್ ಗೆ ಎರಡನೇ ದರ್ಜೆಯ ಪ್ರಜೆಗಳು, ಹಾಗಾಗಿ ಇದನ್ನೆಲ್ಲಾ ನೆನಪಿನಲ್ಲಿ ಇಟ್ಟುಕೊಂಡು ಹಿಂದೂಗಳು ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಎಲ್ಲಿ ಇಡಬೇಕು ಎಂದು ನೋಡಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು