1:27 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಾಣ

09/04/2025, 21:47

ಬೆಂಗಳೂರು(reporterkarnataka.com): ಶಿಕ್ಷಣದ ಸರ್ವತೋಮುಖ ಬೆಳವಣಿಗೆ ದೃಷ್ಟಿಯಿಂದ ಎಂಬೆಸ್ಸಿ ಗಾಲ್ಫ್ ಲಿಂಕ್ ಸಂಸ್ಥೆ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಿಸಿಕೊಟ್ಟಿದ್ದು, ಬುಧವಾರ ಕ್ಷೇತ್ರದ ಶಾಸಕ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್, ಬೆಂಗಳೂರು ಧರ್ಮ ಪ್ರಾಂತ್ಯದ ಉಪ ಧರ್ಮಾಧ್ಯಕ್ಷ ಜೋಸೆಫ್ ಸುಸೈನಾಥನ್ ಇದನ್ನು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸುಸೈನಾಥನ್, ಸಚಿವ ಕೆ.ಜೆ. ಜಾರ್ಜ್ ಅವರು ಶಿಕ್ಷಣ ಕ್ಷೇತ್ರಕ್ಕೆ ತೋರುತ್ತಿರುವ ಬದ್ಧತೆ ಶ್ಲಾಘನೀಯ. ಅನಿವಾರ್ಯ ಕಾರಣಗಳಿಂದ ಸಚಿವರು ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೂ ಅವರ ಪತ್ನಿ ಸುಜಾ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವುದು ಸಂತೋಷ ತಂದಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುಜಾ ಜಾರ್ಜ್ ಮಾತನಾಡಿ, “ಸುಂದರವಾದ ಆಟದ ಮೈದಾನ ನೋಡಿದಾಗ ನಮ್ಮ ಶಾಲಾದಿನಗಳು ನೆನಪಾದವು. ಪ್ರಸ್ತುತ ಒದಗಿಸಿರುವ ಈ ಕ್ರೀಡಾ ಸೌಲಭ್ಯದಿಂದ ವಿದ್ಯಾರ್ಥಿಗಳು ಈಗ ಎಷ್ಟು ಖುಷಿಯಾಗಿರಬಹುದು ಎಂದು ನಾನು ಊಹಿಸಬಲ್ಲೆ” ಎಂದು ಅವರು ಹೇಳಿದರು.
ಗುಜರಾತ್‌ನಲ್ಲಿ ಎಐಸಿಸಿ ಸಭೆಯ ನಿಮಿತ್ತ ಕೆ.ಜೆ.ಜಾರ್ಜ್ ತೆರಳಿದ್ದಾರೆ, ಮಗ ರಾಣಾ ಜಾರ್ಜ್ ಕೂಡ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದ ಕಾರಣ, ಆಟದ ಮೈದಾನ ಉದ್ಘಾಟನೆಗೆ ನಾನು ಬರುವಂತಾಯಿತು. ನಮ್ಮ ಕುಟುಂಬವನ್ನು ಇಲ್ಲಿ ಪ್ರತಿನಿಧಿಸಲು ಸಂತೋಷಪಡುತ್ತೇನೆ ಎಂದರು.
ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ದಾಸ್ ಜೋಸೆಫ್ ಮಾತನಾಡಿ, ಶಾಲಾ ಸೌಲಭ್ಯಗಳಿಗಾಗಿ ನಾವು ಸಚಿವ ಕೆ.ಜೆ. ಜಾರ್ಜ್ ಅವರನ್ನು ಸಂಪರ್ಕಿಸಿದಾಗ, ಅವರು ರಾಣಾ ಜಾರ್ಜ್ ಅವರನ್ನು ತಕ್ಷಣವೇ ಸ್ಪಂದಿಸುವಂತೆ ತಿಳಿಸಿದರು. ಅದರ ಪರಿಣಾಮ ಈ ಕ್ರೀಡಾಂಗಣ ನಿರ್ಮಾಣಗೊಂಡಿದೆ ಎಂದು ಹೇಳಿದರು.
ಸಂಸ್ಥೆಯ ವ್ಯವಸ್ಥಾಪಕ ಅರುಳಪ್ಪ ಮತ್ತಿತರರು ಇದ್ದರು. ಇದಕ್ಕೂ ಮುನ್ನ ಸುಜಾ ಜಾರ್ಜ್, ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸೂಸೈನಾಥನ್, ಪ್ರಾಂಶುಪಾಲರಾದ ದಾಸ್ ಜೋಸೆಫ್ ಮತ್ತು ವ್ಯವಸ್ಥಾಪಕ ಅರುಳಪ್ಪ ಸಾಂಕೇತಿಕವಾಗಿ ಫುಟ್‌ಬಾಲ್ ಕಿಕ್ ಮಾಡುವ ಮೂಲಕ ಕ್ರೀಡಾಂಗಣ ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು