8:38 PM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಾಣ

09/04/2025, 21:47

ಬೆಂಗಳೂರು(reporterkarnataka.com): ಶಿಕ್ಷಣದ ಸರ್ವತೋಮುಖ ಬೆಳವಣಿಗೆ ದೃಷ್ಟಿಯಿಂದ ಎಂಬೆಸ್ಸಿ ಗಾಲ್ಫ್ ಲಿಂಕ್ ಸಂಸ್ಥೆ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಿಸಿಕೊಟ್ಟಿದ್ದು, ಬುಧವಾರ ಕ್ಷೇತ್ರದ ಶಾಸಕ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್, ಬೆಂಗಳೂರು ಧರ್ಮ ಪ್ರಾಂತ್ಯದ ಉಪ ಧರ್ಮಾಧ್ಯಕ್ಷ ಜೋಸೆಫ್ ಸುಸೈನಾಥನ್ ಇದನ್ನು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸುಸೈನಾಥನ್, ಸಚಿವ ಕೆ.ಜೆ. ಜಾರ್ಜ್ ಅವರು ಶಿಕ್ಷಣ ಕ್ಷೇತ್ರಕ್ಕೆ ತೋರುತ್ತಿರುವ ಬದ್ಧತೆ ಶ್ಲಾಘನೀಯ. ಅನಿವಾರ್ಯ ಕಾರಣಗಳಿಂದ ಸಚಿವರು ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೂ ಅವರ ಪತ್ನಿ ಸುಜಾ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವುದು ಸಂತೋಷ ತಂದಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುಜಾ ಜಾರ್ಜ್ ಮಾತನಾಡಿ, “ಸುಂದರವಾದ ಆಟದ ಮೈದಾನ ನೋಡಿದಾಗ ನಮ್ಮ ಶಾಲಾದಿನಗಳು ನೆನಪಾದವು. ಪ್ರಸ್ತುತ ಒದಗಿಸಿರುವ ಈ ಕ್ರೀಡಾ ಸೌಲಭ್ಯದಿಂದ ವಿದ್ಯಾರ್ಥಿಗಳು ಈಗ ಎಷ್ಟು ಖುಷಿಯಾಗಿರಬಹುದು ಎಂದು ನಾನು ಊಹಿಸಬಲ್ಲೆ” ಎಂದು ಅವರು ಹೇಳಿದರು.
ಗುಜರಾತ್‌ನಲ್ಲಿ ಎಐಸಿಸಿ ಸಭೆಯ ನಿಮಿತ್ತ ಕೆ.ಜೆ.ಜಾರ್ಜ್ ತೆರಳಿದ್ದಾರೆ, ಮಗ ರಾಣಾ ಜಾರ್ಜ್ ಕೂಡ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದ ಕಾರಣ, ಆಟದ ಮೈದಾನ ಉದ್ಘಾಟನೆಗೆ ನಾನು ಬರುವಂತಾಯಿತು. ನಮ್ಮ ಕುಟುಂಬವನ್ನು ಇಲ್ಲಿ ಪ್ರತಿನಿಧಿಸಲು ಸಂತೋಷಪಡುತ್ತೇನೆ ಎಂದರು.
ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ದಾಸ್ ಜೋಸೆಫ್ ಮಾತನಾಡಿ, ಶಾಲಾ ಸೌಲಭ್ಯಗಳಿಗಾಗಿ ನಾವು ಸಚಿವ ಕೆ.ಜೆ. ಜಾರ್ಜ್ ಅವರನ್ನು ಸಂಪರ್ಕಿಸಿದಾಗ, ಅವರು ರಾಣಾ ಜಾರ್ಜ್ ಅವರನ್ನು ತಕ್ಷಣವೇ ಸ್ಪಂದಿಸುವಂತೆ ತಿಳಿಸಿದರು. ಅದರ ಪರಿಣಾಮ ಈ ಕ್ರೀಡಾಂಗಣ ನಿರ್ಮಾಣಗೊಂಡಿದೆ ಎಂದು ಹೇಳಿದರು.
ಸಂಸ್ಥೆಯ ವ್ಯವಸ್ಥಾಪಕ ಅರುಳಪ್ಪ ಮತ್ತಿತರರು ಇದ್ದರು. ಇದಕ್ಕೂ ಮುನ್ನ ಸುಜಾ ಜಾರ್ಜ್, ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸೂಸೈನಾಥನ್, ಪ್ರಾಂಶುಪಾಲರಾದ ದಾಸ್ ಜೋಸೆಫ್ ಮತ್ತು ವ್ಯವಸ್ಥಾಪಕ ಅರುಳಪ್ಪ ಸಾಂಕೇತಿಕವಾಗಿ ಫುಟ್‌ಬಾಲ್ ಕಿಕ್ ಮಾಡುವ ಮೂಲಕ ಕ್ರೀಡಾಂಗಣ ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು