9:38 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಾಣ

09/04/2025, 21:47

ಬೆಂಗಳೂರು(reporterkarnataka.com): ಶಿಕ್ಷಣದ ಸರ್ವತೋಮುಖ ಬೆಳವಣಿಗೆ ದೃಷ್ಟಿಯಿಂದ ಎಂಬೆಸ್ಸಿ ಗಾಲ್ಫ್ ಲಿಂಕ್ ಸಂಸ್ಥೆ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಿಸಿಕೊಟ್ಟಿದ್ದು, ಬುಧವಾರ ಕ್ಷೇತ್ರದ ಶಾಸಕ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್, ಬೆಂಗಳೂರು ಧರ್ಮ ಪ್ರಾಂತ್ಯದ ಉಪ ಧರ್ಮಾಧ್ಯಕ್ಷ ಜೋಸೆಫ್ ಸುಸೈನಾಥನ್ ಇದನ್ನು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸುಸೈನಾಥನ್, ಸಚಿವ ಕೆ.ಜೆ. ಜಾರ್ಜ್ ಅವರು ಶಿಕ್ಷಣ ಕ್ಷೇತ್ರಕ್ಕೆ ತೋರುತ್ತಿರುವ ಬದ್ಧತೆ ಶ್ಲಾಘನೀಯ. ಅನಿವಾರ್ಯ ಕಾರಣಗಳಿಂದ ಸಚಿವರು ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೂ ಅವರ ಪತ್ನಿ ಸುಜಾ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವುದು ಸಂತೋಷ ತಂದಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುಜಾ ಜಾರ್ಜ್ ಮಾತನಾಡಿ, “ಸುಂದರವಾದ ಆಟದ ಮೈದಾನ ನೋಡಿದಾಗ ನಮ್ಮ ಶಾಲಾದಿನಗಳು ನೆನಪಾದವು. ಪ್ರಸ್ತುತ ಒದಗಿಸಿರುವ ಈ ಕ್ರೀಡಾ ಸೌಲಭ್ಯದಿಂದ ವಿದ್ಯಾರ್ಥಿಗಳು ಈಗ ಎಷ್ಟು ಖುಷಿಯಾಗಿರಬಹುದು ಎಂದು ನಾನು ಊಹಿಸಬಲ್ಲೆ” ಎಂದು ಅವರು ಹೇಳಿದರು.
ಗುಜರಾತ್‌ನಲ್ಲಿ ಎಐಸಿಸಿ ಸಭೆಯ ನಿಮಿತ್ತ ಕೆ.ಜೆ.ಜಾರ್ಜ್ ತೆರಳಿದ್ದಾರೆ, ಮಗ ರಾಣಾ ಜಾರ್ಜ್ ಕೂಡ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದ ಕಾರಣ, ಆಟದ ಮೈದಾನ ಉದ್ಘಾಟನೆಗೆ ನಾನು ಬರುವಂತಾಯಿತು. ನಮ್ಮ ಕುಟುಂಬವನ್ನು ಇಲ್ಲಿ ಪ್ರತಿನಿಧಿಸಲು ಸಂತೋಷಪಡುತ್ತೇನೆ ಎಂದರು.
ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ದಾಸ್ ಜೋಸೆಫ್ ಮಾತನಾಡಿ, ಶಾಲಾ ಸೌಲಭ್ಯಗಳಿಗಾಗಿ ನಾವು ಸಚಿವ ಕೆ.ಜೆ. ಜಾರ್ಜ್ ಅವರನ್ನು ಸಂಪರ್ಕಿಸಿದಾಗ, ಅವರು ರಾಣಾ ಜಾರ್ಜ್ ಅವರನ್ನು ತಕ್ಷಣವೇ ಸ್ಪಂದಿಸುವಂತೆ ತಿಳಿಸಿದರು. ಅದರ ಪರಿಣಾಮ ಈ ಕ್ರೀಡಾಂಗಣ ನಿರ್ಮಾಣಗೊಂಡಿದೆ ಎಂದು ಹೇಳಿದರು.
ಸಂಸ್ಥೆಯ ವ್ಯವಸ್ಥಾಪಕ ಅರುಳಪ್ಪ ಮತ್ತಿತರರು ಇದ್ದರು. ಇದಕ್ಕೂ ಮುನ್ನ ಸುಜಾ ಜಾರ್ಜ್, ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸೂಸೈನಾಥನ್, ಪ್ರಾಂಶುಪಾಲರಾದ ದಾಸ್ ಜೋಸೆಫ್ ಮತ್ತು ವ್ಯವಸ್ಥಾಪಕ ಅರುಳಪ್ಪ ಸಾಂಕೇತಿಕವಾಗಿ ಫುಟ್‌ಬಾಲ್ ಕಿಕ್ ಮಾಡುವ ಮೂಲಕ ಕ್ರೀಡಾಂಗಣ ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು