9:41 PM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಾಣ

09/04/2025, 21:47

ಬೆಂಗಳೂರು(reporterkarnataka.com): ಶಿಕ್ಷಣದ ಸರ್ವತೋಮುಖ ಬೆಳವಣಿಗೆ ದೃಷ್ಟಿಯಿಂದ ಎಂಬೆಸ್ಸಿ ಗಾಲ್ಫ್ ಲಿಂಕ್ ಸಂಸ್ಥೆ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಿಸಿಕೊಟ್ಟಿದ್ದು, ಬುಧವಾರ ಕ್ಷೇತ್ರದ ಶಾಸಕ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್, ಬೆಂಗಳೂರು ಧರ್ಮ ಪ್ರಾಂತ್ಯದ ಉಪ ಧರ್ಮಾಧ್ಯಕ್ಷ ಜೋಸೆಫ್ ಸುಸೈನಾಥನ್ ಇದನ್ನು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸುಸೈನಾಥನ್, ಸಚಿವ ಕೆ.ಜೆ. ಜಾರ್ಜ್ ಅವರು ಶಿಕ್ಷಣ ಕ್ಷೇತ್ರಕ್ಕೆ ತೋರುತ್ತಿರುವ ಬದ್ಧತೆ ಶ್ಲಾಘನೀಯ. ಅನಿವಾರ್ಯ ಕಾರಣಗಳಿಂದ ಸಚಿವರು ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೂ ಅವರ ಪತ್ನಿ ಸುಜಾ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವುದು ಸಂತೋಷ ತಂದಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುಜಾ ಜಾರ್ಜ್ ಮಾತನಾಡಿ, “ಸುಂದರವಾದ ಆಟದ ಮೈದಾನ ನೋಡಿದಾಗ ನಮ್ಮ ಶಾಲಾದಿನಗಳು ನೆನಪಾದವು. ಪ್ರಸ್ತುತ ಒದಗಿಸಿರುವ ಈ ಕ್ರೀಡಾ ಸೌಲಭ್ಯದಿಂದ ವಿದ್ಯಾರ್ಥಿಗಳು ಈಗ ಎಷ್ಟು ಖುಷಿಯಾಗಿರಬಹುದು ಎಂದು ನಾನು ಊಹಿಸಬಲ್ಲೆ” ಎಂದು ಅವರು ಹೇಳಿದರು.
ಗುಜರಾತ್‌ನಲ್ಲಿ ಎಐಸಿಸಿ ಸಭೆಯ ನಿಮಿತ್ತ ಕೆ.ಜೆ.ಜಾರ್ಜ್ ತೆರಳಿದ್ದಾರೆ, ಮಗ ರಾಣಾ ಜಾರ್ಜ್ ಕೂಡ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದ ಕಾರಣ, ಆಟದ ಮೈದಾನ ಉದ್ಘಾಟನೆಗೆ ನಾನು ಬರುವಂತಾಯಿತು. ನಮ್ಮ ಕುಟುಂಬವನ್ನು ಇಲ್ಲಿ ಪ್ರತಿನಿಧಿಸಲು ಸಂತೋಷಪಡುತ್ತೇನೆ ಎಂದರು.
ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ದಾಸ್ ಜೋಸೆಫ್ ಮಾತನಾಡಿ, ಶಾಲಾ ಸೌಲಭ್ಯಗಳಿಗಾಗಿ ನಾವು ಸಚಿವ ಕೆ.ಜೆ. ಜಾರ್ಜ್ ಅವರನ್ನು ಸಂಪರ್ಕಿಸಿದಾಗ, ಅವರು ರಾಣಾ ಜಾರ್ಜ್ ಅವರನ್ನು ತಕ್ಷಣವೇ ಸ್ಪಂದಿಸುವಂತೆ ತಿಳಿಸಿದರು. ಅದರ ಪರಿಣಾಮ ಈ ಕ್ರೀಡಾಂಗಣ ನಿರ್ಮಾಣಗೊಂಡಿದೆ ಎಂದು ಹೇಳಿದರು.
ಸಂಸ್ಥೆಯ ವ್ಯವಸ್ಥಾಪಕ ಅರುಳಪ್ಪ ಮತ್ತಿತರರು ಇದ್ದರು. ಇದಕ್ಕೂ ಮುನ್ನ ಸುಜಾ ಜಾರ್ಜ್, ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸೂಸೈನಾಥನ್, ಪ್ರಾಂಶುಪಾಲರಾದ ದಾಸ್ ಜೋಸೆಫ್ ಮತ್ತು ವ್ಯವಸ್ಥಾಪಕ ಅರುಳಪ್ಪ ಸಾಂಕೇತಿಕವಾಗಿ ಫುಟ್‌ಬಾಲ್ ಕಿಕ್ ಮಾಡುವ ಮೂಲಕ ಕ್ರೀಡಾಂಗಣ ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು