ಇತ್ತೀಚಿನ ಸುದ್ದಿ
ಮಲೆನಾಡಿನಲ್ಲಿ ಮುಂದುವರಿದ ಮಳೆ: ಶೃಂಗೇರಿ ಬಳಿ ಗುಡ್ಡ ಕುಸಿತ; ಶೃಂಗೇರಿ-ಕಾರ್ಕಳ ರಸ್ತೆ ಬಂದ್
25/06/2025, 11:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಲೆನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರಿದ್ದು, ಶೃಂಗೇರಿ ನೆಮ್ಮಾರ್ ಬಳಿ ಮತ್ತೆ ಗುಡ್ಡ ಕುಸಿತವಾಗಿದೆ.
ಈಗಾಗಲೇ ಶೃಂಗೇರಿ-ಕಾರ್ಕಳ ರೋಡ್ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಗುಡ್ಡ ಕುಸಿಯುವ ಸ್ಥಳದಲ್ಲೇ ಬೀಡು ಬಿಟ್ಟಿರುವ ಜೆಸಿಬಿ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಎನ್.ಎಚ್. ಅಧಿಕಾರಿಗಳು, ಪೊಲೀಸರು, ಜೆಸಿಬಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಗುಡ್ಡ ಕುಸಿದಂತೆ ಸಂಚಾರ ತಡೆದು ತೆರವು ಕಾರ್ಯಾಚರಣೆ ನಡೆಯುತ್ತಿದೆ. 6 ತಿಂಗಳ ನಿರಂತರ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ಮತ್ತೆ-ಮತ್ತೆ ಗುಡ್ಡ ಕುಸಿತವಾಗುತ್ತಿದೆ.