4:05 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Tumkur | ತುಮಕೂರು ಭವಿಷ್ಯದ ಉದ್ಯೋಗ ಅವಕಾಶಗಳ ತವರೂರು: ಎಂ. ಎಸ್. ಪಾಟೀಲ್

25/06/2025, 11:39

ತುಮಕೂರು(reporterkarnataka.com): ಕಲ್ಪತರು ನಾಡು ತುಮಕೂರು ಜಿಲ್ಲೆ ಉದ್ಯೋಗ ಅವಕಾಶಗಳ ಬೃಹತ್ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಶ್ರೀದೇವಿ ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ. ಎಸ್. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ೨೦ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬೆಂಗಳೂರಿನ ನಂತರ ಬೃಹತ್ ಉದ್ಯೋಗ ಸೃಷ್ಟಿಸುವ ಭವಿಷ್ಯದ ನಗರವಾಗಿ ತುಮಕೂರು ಬೆಳೆಯಲಿದೆ ಹೀಗಾಗಿ ಭವಿಷ್ಯದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿದೆ. ದೇಶದ ಮತ್ತು ವಿದೇಶಿ ಬಂಡವಾಳದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂಡವಾಳ ಹೂಡಲು ತುಮಕೂರು ನಗರವನ್ನೇ ಆಯ್ಕೆ ಮಾಡಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಆಟೋಮೊಬೈಲ್ ಸಾಫ್ಟ್ ವೇರ್ ಸೇರಿದಂತೆ ಅನೇಕ ಉದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಮುಂದೆ ಬರುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಮೆಟ್ರೋ ಸಂಪರ್ಕ ತುಮಕೂರಿಗೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಈ ಎಲ್ಲಾ ಕಾರಣಗಳಿಂದ ಬೆಂಗಳೂರಿನ ನಂತರ ತುಮಕೂರು ೨ನೇ ಮತ್ತು ಭವಿಷ್ಯದ ನಗರವಾಗಲಿದೆ ಎಂದು ಹೇಳಿದರು.
ಕಾಲೇಜಿನ ಮೆಡಿಕಲ್ ಡೈರೆಕ್ಟರ್ ಡಾ. ರಮಣ್ ಹುಲಿನಾಯ್ಕರ್ ಮಾತನಾಡಿ, ಇಂದಿನ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಂಡರೆ ಉದ್ಯೋಗ ತಾನಾಗಿ ಹುಡುಕಿಕೊಂಡು ಬರುತ್ತದೆ. ಸಾಮಾಜಿಕ ಜಾಲತಾಣಗಳ (ಸೋಷಿಯಲ್ ಮೀಡಿಯಾ) ದಾಸರಾಗಬೇಡಿ ಮತ್ತು ಹೆಚ್ಚಿನ ಸಮಯವನ್ನು ಇದರಲ್ಲೇ ಕಳೆಯಬೇಡಿ. ಕಾಲೇಜಿನ ಪಾಠದ ಕಡೆ ಹೆಚ್ಚು ಗಮನ ಕೊಡಬೇಕು ಭವಿಷ್ಯದ ಸವಾಲುಗಳನ್ನು ಎದುರಿಸುವಂತಹ ಕೌಶಲ್ಯ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ನೆಲಮಂಗಲ ತಾಲೂಕಿನ ವಣಕಲ್ ಮಲ್ಲೇಶ್ವರ ಸಂಸ್ಥಾನ ಮಠದ ಡಾ.ಬಸವ ರಮಾನಂದ ಸ್ವಾಮೀಜಿ ಮಾತನಾಡಿ, ಆಧ್ಯಾತ್ಮ ಎಂದರೆ ಅಂತರಂಗ ಶುದ್ಧಿ. ಜಗತ್ತು ಸರಿಯಾದ ಹಾದಿಯಲ್ಲಿ ನಡೆಯಬೇಕು. ಪಾಪ, ವಂಚನೆ, ಮೋಸ ಇಲ್ಲದ ಸಮಾಜ ಇರಬೇಕು ಎನ್ನುವುದು ಧರ್ಮ. ಮೊಬೈಲ್ ಬಂದ ಮೇಲೆ, ಸೋಷಿಯಲ್ ಮೀಡಿಯಾಗಳ ಹಾವಳಿ ಹೆಚ್ಚಾದ ನಂತರ ಬಹಳಷ್ಟು ಜನರ ಆರೋಗ್ಯ ಹದಗೆಟ್ಟಿದೆ. ಇಂತಹ ಚಟಗಳಿಂದ ದೂರ ಇರುವುದನ್ನು ಕಲಿತರೆ ಒಳ್ಳೆಯದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಶ್ರೀನಿವಾಸ್ ಮತ್ತು ಆಡಳಿತ ಅಧಿಕಾರಿ ಬ್ರಹ್ಮದೇವಯ್ಯ, ರಂಗಧಾಮಯ್ಯ, ಮೊದಲಾದವರು ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಹೆಚ್ಚು ಅಂಕ ಪಡೆದ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು