9:02 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

Tumkur | ತುಮಕೂರು ಭವಿಷ್ಯದ ಉದ್ಯೋಗ ಅವಕಾಶಗಳ ತವರೂರು: ಎಂ. ಎಸ್. ಪಾಟೀಲ್

25/06/2025, 11:39

ತುಮಕೂರು(reporterkarnataka.com): ಕಲ್ಪತರು ನಾಡು ತುಮಕೂರು ಜಿಲ್ಲೆ ಉದ್ಯೋಗ ಅವಕಾಶಗಳ ಬೃಹತ್ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಶ್ರೀದೇವಿ ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ. ಎಸ್. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ೨೦ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬೆಂಗಳೂರಿನ ನಂತರ ಬೃಹತ್ ಉದ್ಯೋಗ ಸೃಷ್ಟಿಸುವ ಭವಿಷ್ಯದ ನಗರವಾಗಿ ತುಮಕೂರು ಬೆಳೆಯಲಿದೆ ಹೀಗಾಗಿ ಭವಿಷ್ಯದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿದೆ. ದೇಶದ ಮತ್ತು ವಿದೇಶಿ ಬಂಡವಾಳದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂಡವಾಳ ಹೂಡಲು ತುಮಕೂರು ನಗರವನ್ನೇ ಆಯ್ಕೆ ಮಾಡಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಆಟೋಮೊಬೈಲ್ ಸಾಫ್ಟ್ ವೇರ್ ಸೇರಿದಂತೆ ಅನೇಕ ಉದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಮುಂದೆ ಬರುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಮೆಟ್ರೋ ಸಂಪರ್ಕ ತುಮಕೂರಿಗೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಈ ಎಲ್ಲಾ ಕಾರಣಗಳಿಂದ ಬೆಂಗಳೂರಿನ ನಂತರ ತುಮಕೂರು ೨ನೇ ಮತ್ತು ಭವಿಷ್ಯದ ನಗರವಾಗಲಿದೆ ಎಂದು ಹೇಳಿದರು.
ಕಾಲೇಜಿನ ಮೆಡಿಕಲ್ ಡೈರೆಕ್ಟರ್ ಡಾ. ರಮಣ್ ಹುಲಿನಾಯ್ಕರ್ ಮಾತನಾಡಿ, ಇಂದಿನ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಂಡರೆ ಉದ್ಯೋಗ ತಾನಾಗಿ ಹುಡುಕಿಕೊಂಡು ಬರುತ್ತದೆ. ಸಾಮಾಜಿಕ ಜಾಲತಾಣಗಳ (ಸೋಷಿಯಲ್ ಮೀಡಿಯಾ) ದಾಸರಾಗಬೇಡಿ ಮತ್ತು ಹೆಚ್ಚಿನ ಸಮಯವನ್ನು ಇದರಲ್ಲೇ ಕಳೆಯಬೇಡಿ. ಕಾಲೇಜಿನ ಪಾಠದ ಕಡೆ ಹೆಚ್ಚು ಗಮನ ಕೊಡಬೇಕು ಭವಿಷ್ಯದ ಸವಾಲುಗಳನ್ನು ಎದುರಿಸುವಂತಹ ಕೌಶಲ್ಯ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ನೆಲಮಂಗಲ ತಾಲೂಕಿನ ವಣಕಲ್ ಮಲ್ಲೇಶ್ವರ ಸಂಸ್ಥಾನ ಮಠದ ಡಾ.ಬಸವ ರಮಾನಂದ ಸ್ವಾಮೀಜಿ ಮಾತನಾಡಿ, ಆಧ್ಯಾತ್ಮ ಎಂದರೆ ಅಂತರಂಗ ಶುದ್ಧಿ. ಜಗತ್ತು ಸರಿಯಾದ ಹಾದಿಯಲ್ಲಿ ನಡೆಯಬೇಕು. ಪಾಪ, ವಂಚನೆ, ಮೋಸ ಇಲ್ಲದ ಸಮಾಜ ಇರಬೇಕು ಎನ್ನುವುದು ಧರ್ಮ. ಮೊಬೈಲ್ ಬಂದ ಮೇಲೆ, ಸೋಷಿಯಲ್ ಮೀಡಿಯಾಗಳ ಹಾವಳಿ ಹೆಚ್ಚಾದ ನಂತರ ಬಹಳಷ್ಟು ಜನರ ಆರೋಗ್ಯ ಹದಗೆಟ್ಟಿದೆ. ಇಂತಹ ಚಟಗಳಿಂದ ದೂರ ಇರುವುದನ್ನು ಕಲಿತರೆ ಒಳ್ಳೆಯದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಶ್ರೀನಿವಾಸ್ ಮತ್ತು ಆಡಳಿತ ಅಧಿಕಾರಿ ಬ್ರಹ್ಮದೇವಯ್ಯ, ರಂಗಧಾಮಯ್ಯ, ಮೊದಲಾದವರು ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಹೆಚ್ಚು ಅಂಕ ಪಡೆದ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು