12:26 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಮುಗ್ಗಟ್ಟು: ಕದ್ರಿಕಂಬ್ಲ ಸಮೀಪ ದಂಪತಿ ಆತ್ಮಹತ್ಯೆಗೆ ಶರಣು

09/06/2021, 18:12

ಮಂಗಳೂರು(reporterkarnataka news): ಲಾಕ್ ಡೌನ್ ನಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಗರದ ಕದ್ರಿಕಂಬ್ಲ ಸಮೀಪದ ಪಿಂಟೋ ಲೇನ್ ನಲ್ಲಿ ನಡೆದಿದೆ.

ಸುರೇಶ್ ಶೆಟ್ಟಿ(62) ಹಾಗೂ ವಾಣಿ(57) ದಂಪತಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಸುರೇಶ್  ಶೆಟ್ಟಿ ಅವರು ಪ್ರಸಿದ್ಧ ತಬ್ಲಾ ವಾದಕರು. ಆರ್ಕೇಸ್ಟ್ರಾಗಳಲ್ಲಿ ತಬ್ಲಾ ನುಡಿಸುತ್ತಿದ್ದರು. ವಾಣಿ ಅವರು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿದ್ದರು. ಅದರ ಜತೆಗೆ ಚಿಟ್ ಫಂಡ್ ನಡೆಸುತ್ತಿದ್ದರು. ಕೊರೊನಾ ಲಾಕ್ ಡೌನ್ ಆಗಿರುವುದರಿಂದ ಚಿಟ್ ಫಂಡ್ ಕಲೆಕ್ಷನ್ ಸರಿಯಾಗಿ ಆಗುತ್ತಿರಲಿಲ್ಲ. ಈ ಮಧ್ಯೆ ಹೂಡಿಕೆ ಮಾಡಿದವರಲ್ಲಿ ಕೆಲವರು ಕರೆ ಮಾಡಿ ಹಣ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು. ಇದರಿಂದ ನೊಂದ ವಾಣಿ ಅವರು ಬುಧವಾರ ಬೆಳಗ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದರು. ಈ ವಿಷಯ ಅರಿತ ಪತಿ ಸುರೇಶ್ ಶೆಟ್ಟಿ ಅವರು ತಕ್ಷಣ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಪೊಲೀಸ್ ಕಮಿಷನರ್, ಬಹಳ ದುಃಖಕರ ವಿಷಯ. ಇದನ್ನು ಅವರು ಪೊಲೀಸರ ಗಮನಕ್ಕೆ ತರುತ್ತಿದ್ದರೆ, ಹಣಕ್ಕಾಗಿ ಒತ್ತಡ ಹಾಕುತ್ತಿರುವವರನ್ನು ಕರೆಸಿ ಮಾತುಕತೆ ನಡೆಸಬಹುದಿತ್ತು. ಹಣ ಮರು ಪಾವತಿಗೆ ಕಾಲಾವಕಾಶ ಕೇಳಿ ಸಮಸ್ಯೆ ಪರಿಹರಿಸಬಹುದಿತ್ತು. 

ಸಾಲ, ಇಎಂ ಐ ಕಟ್ಟಲು ಯಾರಾದರೂ ಪೀಡಿಸಿದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು