3:12 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಮುಗ್ಗಟ್ಟು: ಕದ್ರಿಕಂಬ್ಲ ಸಮೀಪ ದಂಪತಿ ಆತ್ಮಹತ್ಯೆಗೆ ಶರಣು

09/06/2021, 18:12

ಮಂಗಳೂರು(reporterkarnataka news): ಲಾಕ್ ಡೌನ್ ನಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಗರದ ಕದ್ರಿಕಂಬ್ಲ ಸಮೀಪದ ಪಿಂಟೋ ಲೇನ್ ನಲ್ಲಿ ನಡೆದಿದೆ.

ಸುರೇಶ್ ಶೆಟ್ಟಿ(62) ಹಾಗೂ ವಾಣಿ(57) ದಂಪತಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಸುರೇಶ್  ಶೆಟ್ಟಿ ಅವರು ಪ್ರಸಿದ್ಧ ತಬ್ಲಾ ವಾದಕರು. ಆರ್ಕೇಸ್ಟ್ರಾಗಳಲ್ಲಿ ತಬ್ಲಾ ನುಡಿಸುತ್ತಿದ್ದರು. ವಾಣಿ ಅವರು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿದ್ದರು. ಅದರ ಜತೆಗೆ ಚಿಟ್ ಫಂಡ್ ನಡೆಸುತ್ತಿದ್ದರು. ಕೊರೊನಾ ಲಾಕ್ ಡೌನ್ ಆಗಿರುವುದರಿಂದ ಚಿಟ್ ಫಂಡ್ ಕಲೆಕ್ಷನ್ ಸರಿಯಾಗಿ ಆಗುತ್ತಿರಲಿಲ್ಲ. ಈ ಮಧ್ಯೆ ಹೂಡಿಕೆ ಮಾಡಿದವರಲ್ಲಿ ಕೆಲವರು ಕರೆ ಮಾಡಿ ಹಣ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು. ಇದರಿಂದ ನೊಂದ ವಾಣಿ ಅವರು ಬುಧವಾರ ಬೆಳಗ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದರು. ಈ ವಿಷಯ ಅರಿತ ಪತಿ ಸುರೇಶ್ ಶೆಟ್ಟಿ ಅವರು ತಕ್ಷಣ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಪೊಲೀಸ್ ಕಮಿಷನರ್, ಬಹಳ ದುಃಖಕರ ವಿಷಯ. ಇದನ್ನು ಅವರು ಪೊಲೀಸರ ಗಮನಕ್ಕೆ ತರುತ್ತಿದ್ದರೆ, ಹಣಕ್ಕಾಗಿ ಒತ್ತಡ ಹಾಕುತ್ತಿರುವವರನ್ನು ಕರೆಸಿ ಮಾತುಕತೆ ನಡೆಸಬಹುದಿತ್ತು. ಹಣ ಮರು ಪಾವತಿಗೆ ಕಾಲಾವಕಾಶ ಕೇಳಿ ಸಮಸ್ಯೆ ಪರಿಹರಿಸಬಹುದಿತ್ತು. 

ಸಾಲ, ಇಎಂ ಐ ಕಟ್ಟಲು ಯಾರಾದರೂ ಪೀಡಿಸಿದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು