7:24 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು