5:44 PM Sunday7 - June 2026
ಬ್ರೇಕಿಂಗ್ ನ್ಯೂಸ್
Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ

ಇತ್ತೀಚಿನ ಸುದ್ದಿ

ಕೊರೊನಾ ಬರುತ್ತೆ ಎಂಬ ಭಯದಿಂದ ಗದಗದ ಮಹಿಳೆ ನೇಣಿಗೆ ಶರಣು: ಸಾಗರದಲ್ಲಿ ಪಾಸಿಟಿವ್ ಬಂದ ಭೀತಿಯಿಂದ ವೃದ್ದ ನೀರಿಗೆ ಹಾರಿ ಸಾವು

23/05/2021, 16:07

ಸಾಗರ/ಗದಗ(reporterkarnataka news): ಒಂದು ಕಡೆ ಕೊರೊನಾ ಸೋಂಕಿನಿಂದ ಜನರು ಸಾಯುತ್ತಿದ್ದರೆ, ಇನ್ನೊಂದು ಕಡೆ ಕೊರೊನಾ ಬರುತ್ತಾ ಎಂಬ ಭಯದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜೆಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಗದಗ ಸಮೀಪದ ಗ್ರಾಮವೊಂದರ ಸುಮಾರು 45ರ ಹರೆಯದ ಮಹಿಳೆಯೊಬ್ಬರು ತನಗೆ ಕೊರೊನಾ ಬರಬಹುದು ಎಂಬ ಭಯದಿಂದಲೇ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಕೊರೊನಾ ಪರೀಕ್ಷೆ ನಡೆಸುವಂತೆ ಪರಿಚಯಸ್ಥರು ಆಕೆಗೆ ಸಲಹೆ ನೀಡಿದ್ದರು. ಆದರೆ ಭಯಭೀತರಾದ ಮಹಿಳೆ ಸಾವಿಗೆ ಶರಣಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ‌ ಕಾರ್ಗಲ್ ಬಳಿ ಶನಿವಾರ ಲಿಂಗೇಗೌಡ (68) ಎಂಬವರು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೆದರಿ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ.

ಕೆಪಿಸಿ ನಿವೃತ್ತ ಉದ್ಯೋಗಿಯಾಗಿರುವ ಲಿಂಗೇಗೌಡ ಆರೋಗ್ಯ ಸರಿಯಿಲ್ಲದ ಕಾರಣ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಶನಿವಾರ ಆಸ್ಪತ್ರೆಗೆ ದಾಖಲಾಗಲು ವೈದ್ಯರು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿದ ಲಿಂಗೇಗೌಡ ಅವರು ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು